ಬಿಪಿನ್ ರಾವತ್ 
ದೇಶ

ಹಂದ್ವಾರ ಕಾರ್ಯಾಚರಣೆ ನಾಗರೀಕ ಜೀವ ರಕ್ಷಿಸುವಲ್ಲಿ ಸೇನಾಪಡೆಗಳ ಬದ್ಧತೆಯನ್ನು ತೋರಿಸುತ್ತದೆ: ಬಿಪಿನ್ ರಾವತ್

ಹಂದ್ವಾರ ಕಾರ್ಯಾಚರಣೆಯು ನಾಗರೀಕ ಜೀವ ರಕ್ಷಿಸುವಲ್ಲಿ ಸೇನಾಪಡೆಗಳಲ್ಲಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಭಾನುವಾರ ಹೇಳಿದ್ದಾರೆ. 

ನವದೆಹಲಿ: ಹಂದ್ವಾರ ಕಾರ್ಯಾಚರಣೆಯು ನಾಗರೀಕ ಜೀವ ರಕ್ಷಿಸುವಲ್ಲಿ ಸೇನಾಪಡೆಗಳಲ್ಲಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಭಾನುವಾರ ಹೇಳಿದ್ದಾರೆ. 

ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಉಗ್ರರು ನಾಗರೀಕ ಪ್ರದೇಶವೊಂದರ ಮನೆಯಲ್ಲಿ ಅಡಗಿ ಕುಳಿತು ಜನರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದರು. ಈ ವೇಳೆ ಸೇನೆ ನಡೆಸಿದ ಕಾರ್ಯಾಚರಣೆ ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾವತ್ ಅವರು, ಜನರ ಜೀವ ರಕ್ಷಿಸುವಲ್ಲಿ ಸೇನೆ ಎಷ್ಟರ ಮಟ್ಟಿಗೆ ಬದ್ಧತೆಯನ್ನು ಹೊಂದಿದೆ ಎಂಬುದನ್ನು ಈ ಕಾರ್ಯಾಚರಣೆ ತೋರಿಸುತ್ತದೆ. ಒತ್ತೆಯಾಳಾಗಿದ್ದ ನಾಗರೀಕರ ರಕ್ಷಿಸಲು ತೆರಳಿದ್ದ ಭದ್ರತಾಪಡೆಗಳ ಮುಂದಾಳತ್ವನ್ನು ಕಮಾಂಡ್ ಆಫೀಸರ್ ಆಶುತೋಷ್ ಶರ್ಮಾ ವಹಿಸಿದ್ದರು. ತಮ್ಮ ಪ್ರಾಣ ರಕ್ಷಣೆಗೂ ಮುನ್ನ ಸೇವೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ಹುತಾತ್ಮ ಯೋಧರ ವೀರತ್ವಕ್ಕೆ ಇಡೀ ದೇಶ ಹೆಮ್ಮೆ ಪಡುತ್ತಿದೆ. ಉಗ್ರರ ಹುಟ್ಟಡಗಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ವೀರ ಯೋಧರಿಗೆ ಗೌರವ ಸಲ್ಲಿಸುತ್ತೇವೆ. ಅವರ ಕುಟುಂಬಗಳಿಗೆ ಸಂತಾಪವನ್ನು ಸೂಚಿಸುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT