ಯೋಗಿ ಆದಿತ್ಯನಾಥ್ 
ದೇಶ

ನಮ್ಮ ದೇಶದಲ್ಲಿ ಕೊರೋನಾ ಹರಡಲು ತಬ್ಲಿಘಿಗಳೇ ಕಾರಣ:ಯೋಗಿ ಆದಿತ್ಯನಾಥ್

ಕೊರೋನಾ ವೈರಸ್ ಹರಡಲು ತಬ್ಲಿಘಿ ಜಮಾತ್ ಸದಸ್ಯರೇ ಕಾರಣ ಎಂದು ಆರೋಪಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವೈರಸ್ ಸೋಂಕಿಗೆ ಒಳಗಾಗುವುದು ಅಪರಾಧವಲ್ಲ ಆದರೆ ಅದನ್ನು ಮರೆಮಾಚುವುದು ಖಂಡಿತ ಅಪರಾಧ ಎಂದು ಹೇಳಿದ್ದಾರೆ.

ಲಕ್ನೊ: ಕೊರೋನಾ ವೈರಸ್ ಹರಡಲು ತಬ್ಲಿಘಿ ಜಮಾತ್ ಸದಸ್ಯರೇ ಕಾರಣ ಎಂದು ಆರೋಪಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸೋಂಕಿಗೆ ಒಳಗಾಗುವುದು ಅಪರಾಧವಲ್ಲ ಆದರೆ ಅದು ತಮಗೆ ಬಂದಿದೆ ಎಂದು ಮರೆಮಾಚುವುದು ಖಂಡಿತ ಅಪರಾಧ ಎಂದು ಹೇಳಿದ್ದಾರೆ.

ಕೊರೋನಾ ಹಬ್ಬಿಸಿ ಅಪರಾಧವೆಸಗಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಹ ಎಚ್ಚರಿಕೆ ನೀಡಿದರು. ನಿನ್ನೆ ಸುದ್ದಿವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಬ್ಬಿಸುವಲ್ಲಿ ತಬ್ಲಿಘಿ ಜಮಾತ್ ಪಾತ್ರ ಅತ್ಯಂತ ಖಂಡನೀಯ. ಸೋಂಕು ದೇಹಕ್ಕೆ ತಾಗಿಸಿಕೊಳ್ಳುವುದು ಅಪರಾಧವಲ್ಲ. ಆದರೆ ಈ ರೋಗವನ್ನು ಬೇರೊಬ್ಬರಿಗೆ ಹರಡುವುದು ಖಂಡಿತವಾಗಿಯೂ ತಪ್ಪು. ತಬ್ಲಿಘಿ ಜಮಾತ್ ಗೆ ಸಂಬಂಧಪಟ್ಟವರು ಈ ಬಹುದೊಡ್ಡ ಅಪರಾಧವನ್ನು ಮಾಡಿದ್ದಾರೆ ಎಂದರು.

ಉತ್ತರ ಪ್ರದೇಶ ಮತ್ತು ಬೇರೆ ಕಡೆಗಳಲ್ಲಿ ಕೊರೋನಾ ವೈರಸ್ ಹಬ್ಬಲು ತಬ್ಲಿಘಿ ಜಮಾತ್ ಕಾರಣವೆಂದು ತಿಳಿದುಬಂದಿದೆ. ತಬ್ಲಿಘಿ ಸದಸ್ಯರು ಆರಂಭದಲ್ಲಿ ಮರೆಮಾಚದೆ ವೈರಸ್ ಹಬ್ಬುವುದನ್ನು ತಡೆದಿದ್ದರೆ ಖಂಡಿತವಾಗಿಯೂ ಇಷ್ಟು ವ್ಯಾಪಕವಾಗಿ ಹರಡುತ್ತಿರಲಿಲ್ಲ ಎಂದರು.

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಕಳೆದ ಮಾರ್ಚ್ ಆರಂಭದಲ್ಲಿ ತಬ್ಲಿಘಿ ಜಮಾತ್ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇದಕ್ಕೆ ಪ್ರಪಂಚದ ಹಲವು ದೇಶಗಳಿಂದ ಬಂದಿದ್ದ ತಬ್ಲಿಘಿ ಸದಸ್ಯರಿಂದ ಕೊರೋನಾ ವ್ಯಾಪಕವಾಗಿ ಹಬ್ಬಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT