ಸಾಂದರ್ಭಿಕ ಚಿತ್ರ 
ದೇಶ

ಎಲ್ಲಾ ನಿರ್ಗತಿಕ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ

ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ನವದೆಹಲಿ: ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ದೇಶದ ಬಡವರಿಗೆ ಅಗತ್ಯವಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ವಿನಮ್ರದ ಕೊಡುಗೆಯಿದು. ಈ ಸಮಯದಲ್ಲಿ ಕಾರ್ಮಿಕರ ನೆರವಿಗೆ ಬರುವುದು ಅತ್ಯಗತ್ಯವಾಗಿದೆ. ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ತೋರಿಸುವ ಆಸಕ್ತಿಯನ್ನು ಸರ್ಕಾರ ನಮ್ಮ ದೇಶದಲ್ಲಿರುವ ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಏಕೆ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.

ವಲಸೆ ಕಾರ್ಮಿಕರನ್ನು ರೈಲಿನಲ್ಲಿ ಉಚಿತವಾಗಿ ಅವರ ಊರುಗಳಿಗೆ ಕಳುಹಿಸಿ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯಗಳನ್ನು ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT