ಸಾಂದರ್ಭಿಕ ಚಿತ್ರ 
ದೇಶ

ಎಲ್ಲಾ ನಿರ್ಗತಿಕ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಸೋನಿಯಾ ಗಾಂಧಿ

ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ನವದೆಹಲಿ: ದೇಶದ ವಿವಿಧ ರಾಜ್ಯಗಳಿಂದ ತಮ್ಮ ತಮ್ಮ ಊರುಗಳಿಗೆ ಹೋಗಲು ಕಷ್ಟಪಡುತ್ತಿರುವ ವಲಸೆ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸುವುದಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಕಟಿಸಿದ್ದಾರೆ.

ಈ ಸಂಬಂಧ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು ಅಗತ್ಯವಿರುವ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ದೇಶದ ಬಡವರಿಗೆ ಅಗತ್ಯವಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ವಿನಮ್ರದ ಕೊಡುಗೆಯಿದು. ಈ ಸಮಯದಲ್ಲಿ ಕಾರ್ಮಿಕರ ನೆರವಿಗೆ ಬರುವುದು ಅತ್ಯಗತ್ಯವಾಗಿದೆ. ವಿದೇಶಗಳಲ್ಲಿ ಸಿಲುಕಿ ಹಾಕಿಕೊಂಡಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ತೋರಿಸುವ ಆಸಕ್ತಿಯನ್ನು ಸರ್ಕಾರ ನಮ್ಮ ದೇಶದಲ್ಲಿರುವ ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಏಕೆ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.

ವಲಸೆ ಕಾರ್ಮಿಕರನ್ನು ರೈಲಿನಲ್ಲಿ ಉಚಿತವಾಗಿ ಅವರ ಊರುಗಳಿಗೆ ಕಳುಹಿಸಿ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯಗಳನ್ನು ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT