ಶಿವ ಪರಮಾತ್ಮ 
ದೇಶ

ಕನಸಿನಲ್ಲಿ ಬಂದ ಶಿವ, ತನ್ನ ಮರ್ಮಾಂಗವನ್ನೇ ಅರ್ಪಿಸಿದ ಕೈದಿ, ಸಾವು-ಬದುಕಿನ ಹೋರಾಟ!

25 ವರ್ಷದ ಕೈದಿಯೊಬ್ಬ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಗ್ವಾಲಿಯಾರ್: 25 ವರ್ಷದ ಕೈದಿಯೊಬ್ಬ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಮಧ್ಯಪ್ರದೇಶದ ಗ್ವಾಲಿಯಾರ್ ನಗರದ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ವಿಷ್ಣು ಕುಮಾರ್ ಎಂಬಾತ ಕೊಲೆ ಪ್ರಕರಣ ಸಂಬಂಧ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಬೆಳಗ್ಗೆ 6.30ರ ಸುಮಾರಿಗೆ ಆತ ಕಾರಾಗೃಹದಲ್ಲಿರುವ ಶಿವನ ದೇವಸ್ಥಾನದ ಮುಂದೆ ಪ್ರಾರ್ಥಿಸಿ ತನ್ನ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ಜೈಲು ಅಧೀಕ್ಷಕ ಮನೋಜ್ ಸಾಹು ಹೇಳಿದ್ದಾರೆ. 

ತೀವ್ರ ನೋವಿನಿಂದ ಅಳುತ್ತಿದ್ದ ವಿಷ್ಣು ಕುಮಾರ್ ನನ್ನು ಗಮನಿಸಿದ ಸಹ ಕೈದಿಗಳು ಜೈಲು ಅಧೀಕ್ಷಕರಿಗೆ ಸುದ್ದಿ ಮುಟ್ಟಿಸಿದ್ದಾರೆ. ಅಲ್ಲಿಗೆ ಬಂದ ಅಧಿಕಾರಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಆತನ ಪರಿಸ್ಥಿತಿ ಗಂಭೀರವಾಗಿದೆ. ಇನ್ನು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ತಮ್ಮ ಮರ್ಮಾಂಗವನ್ನು ಕತ್ತರಿಸಿಕೊಂಡ ಬಗ್ಗೆ ವಿಚಾರಿಸಿದಾಗ ಸಾಹು, ತನ್ನ ಕನಸಿನಲ್ಲಿ ಶಿವ ಪರಮಾತ್ಮ ಬಂದಿದ್ದು ಅವನ ಇಚ್ಛೆಯಂತೆ ನಾನು ನನ್ನ ಮರ್ಮಾಂಗವನ್ನು ಅರ್ಪಿಸಿದ್ದೇನೆ ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!