ಪಿಎಂ ನರೇಂದ್ರ ಮೋದಿ 
ದೇಶ

ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳ ಸಭೆ ಕರೆದ ಪಿಎಂ ಮೋದಿ

ವಿಶಾಖಪಟ್ಟಣಂ ಅನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.

ನವದೆಹಲಿ: ವಿಶಾಖಪಟ್ಟಣಂ ಅನಿಲ ಸೋರಿಕೆ ದುರಂತ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆ ಕರೆದಿದ್ದಾರೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.ಇಂದು ನಸುಕಿನ ಜಾವ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡುತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ  ಹರಡಿ ಸಾವಿರಾರು ಮಂದಿ ಅಸ್ವಸ್ಥಕ್ಕೀಡಾಗಿದ್ದಾರೆ.

ಈ ಕುರಿತು ಇಂದು ಬೆಳಗ್ಗೆ ಗೃಹ ಸಚಿವಾಲಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡ ಪ್ರಧಾನಿ ಅಲ್ಲಿನ ಪರಿಸ್ಥಿತಿ ಬಗ್ಗೆ ತಿಳಿದುಕೊಂಡರು. ಅಲ್ಲಿ ಸದ್ಯ ಪರಿಸ್ಥಿತಿಯನ್ನು ನಿಗಾವಹಿಸಲಾಗುತ್ತಿದೆ. ಗೃಹ ಸಚಿವ ಅಮಿತಾ ಶಾ ಕೂಡ ಘಟನೆ ತೀರಾ ದುರದೃಷ್ಟಕರ ಎಂದಿದ್ದಾರೆ.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಕರೆ: ಇದೇ ಸಂದರ್ಭದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ ಅಲ್ಲಿನ ಪರಿಸ್ಥಿತಿ ಬಗ್ಗೆ ವಿಚಾರಿಸಿದರು. ಎಲ್ಲಾ ರೀತಿಯ ನೆರವು ಮತ್ತು ಸಹಕಾರ ನೀಡುವುದಾಗಿ ಭರವಸೆ ಕೊಟ್ಟರು.

ವಿಶಾಖಪಟ್ಟಣಂನ ಫ್ಯಾಕ್ಟರಿಯ ಸುತ್ತಮುತ್ತ ನಿವಾಸಿಗಳ ಸುರಕ್ಷತೆಗೆ ನಾನು ಈ ಸಂದರ್ಭದಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT