ಡಿ. ವಿ. ಸದಾನಂದಗೌಡ 
ದೇಶ

ದೆಹಲಿಯಿಂದ ರಾಜ್ಯಕ್ಕೆ ವಿಶೇಷ ರೈಲು,ದುಬೈನಿಂದ ಬೆಂಗಳೂರಿಗೆ ವಿಶೇಷ ವಿಮಾನ-ಸದಾನಂದಗೌಡ

ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. 

ನವದೆಹಲಿ: ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. 

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರೇಲ್ವೆ ಸಚಿವ ಪಿಯುಶ್‌ ಗೋಯಲ್‌ ಅವರೊಂದಿಗೆ ತಾವು ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದಿದ್ದಾರೆ.

ದೆಹಲಿಯ ಹೊರತಾಗಿ ಹರಿಯಾಣ, ಪಂಜಾಬ್‌ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್‌ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದು, ಆ ರಾಜ್ಯಗಳ ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT