ಸಂಗ್ರಹ ಚಿತ್ರ 
ದೇಶ

ಪ್ರೇಮಿಯ ನೆರವಿನಿಂದ ಗಂಡನನ್ನು ಕೊಂದು 'ಕೊರೋನಾ ಸಾವಿನ ಕಥೆ' ಹೇಳಿದ ಮಹಿಳೆ!

ಮಹಿಳೆಯೊಬ್ಬಳು  ತನ್ನ ಗಂಡನನ್ನು ಸ್ನೇಹಿತನ ನೆರವಿನಿಂದ ಕೊಂದು ಬಳಿಕ ಆತ ಕೊರೋನಾ ವೈರಸ್ ಬಂದು ಸಾವನ್ನಪ್ಪಿರುವುದಾಗಿ "ಕಥೆ" ಕಟ್ಟಿದ ಘಟನೆ ದೆಹಲಿಯಲ್ಲಿ ನಡೆದಿದೆ. 

ನವದೆಹಲಿ: ಮಹಿಳೆಯೊಬ್ಬಳು  ತನ್ನ ಗಂಡನನ್ನು ಸ್ನೇಹಿತನ ನೆರವಿನಿಂದ ಕೊಂದು ಬಳಿಕ ಆತ ಕೊರೋನಾ ವೈರಸ್ ಬಂದು ಸಾವನ್ನಪ್ಪಿರುವುದಾಗಿ "ಕಥೆ" ಕಟ್ಟಿದ ಘಟನೆ ದೆಹಲಿಯಲ್ಲಿ ನಡೆದಿದೆ.

ವಾಯುವ್ಯ ದೆಹಲಿಯ ಅಶೋಕ್ ವಿಹಾರ್‌ ನಲ್ಲಿ ನಡೆದ ಘಟನೆಯಲ್ಲಿ ಶರತ್ ದಾಸ್ (46) ಹತ್ಯೆಯಾಗಿರುವ ನತದೃಷ್ಟ. ಆತನ ಪತ್ನಿ ಅನಿತಾ ಈ ಕೃತ್ಯ ಎಸಗಿದ್ದಾಳೆ. 

ಅಶೋಕ್ ವಿಹಾರ್‌ ಪ್ರದೇಶದಲ್ಲಿ ಅಂಗಡಿಯನ್ನು ನಡೆಸುತ್ತಿದ್ದ ಶರತ್ ಮೇ 2 ರಂದು ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅನಿತಾ ನೆರೆಮನೆಯಾಕೆಗೆ ತಿಳಿಸಿದ್ದಾಳೆ.  ಆ ನಂತರ ನೆರೆಹೊರೆಯವರು ಈ ತಮ್ಮ ಪ್ರದೇಶದಲ್ಲಿ ಕೋವಿಡ್ ಸಾವು ನಡೆದಿದ್ದನ್ನು ಪೋಲೀಸರಿಗೆ ಹೇಳಿದ್ದಾರೆ. ಆದರೆ ಪೋಲೀಸರು ಆಗಮಿಸಿ ಪರಿಶೀಲಿಸುವಾಗ ಅನಿತಾಗೆ ತನ್ನ ಪತಿ ಶರತ್ ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿರುವ ಬಗ್ಗೆ ಯಾವ ದಾಖಲೆ ನೀಡಲು ಸಾಧ್ಯವಾಗಿಲ್ಲ. ನಿಜಕ್ಕೂ ಶರತ್ ಸಾವಿಗೆ ಮುನ್ನ ಆರೋಗ್ಯವಾಗಿದ್ದ ಎಂದು ಅಕ್ಕಪಕ್ಕದ ಮನೆಗಳ ನಿವಾಸಿಗಳು ಪೋಲೀಸರಿಗೆ ವಿವರಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿ ಒಂದೆರಡು ದಿನಗಳ ನಂತರ ವೈದ್ಯರು ತಮ್ಮ ವರದಿ ಕೊಟ್ಟಿದ್ದು ಶರತ್ ನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ಪೋಲೀಸರು ಪತ್ನಿ ಅನಿತಾಳನ್ನು ಪ್ರಶ್ನಿಸಿದಾಗ ಆಕೆ ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ. ತಾನು ಇನ್ನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣ ನಮ್ಮಿಬ್ಬರ ಪ್ರೀತಿಗೆ ಅಡ್ಡಿಯಾಗಿದ್ದ ಶರತ್ ನನ್ನು ಮುಗಿಸಲು ನಿರ್ಧರಿಸಿದ್ದಾಗಿ ಅನಿತಾ ಹೇಳಿದ್ದಾಳೆ. ಮೇ 1ರ ರಾತ್ರಿ ಪತಿ ನಿದ್ರಿಸಿದ ನಂತರ ತನ್ನ ಪ್ರೇಮಿಯನ್ನು ಕರೆದ ಅನಿತಾ ಆತನೊಂದಿಗೆ ಸೇರಿ ಶರತ್ ನನ್ನು ಹತ್ಯೆ ಮಾಡಿದ್ದಾಳೆ. ಕೃತ್ಯ ನಡೆಸಿದ ನಂತರ ಶವವನ್ನು ಸುಟ್ಟು ಹಾಕಲು ಯೋಜಿಸಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!