ಲಾಕ್ ಡೌನ್ 3.0: ಬಿಸಿಲ ಬೇಗೆ ನಡುವೆ 200 ಕಿ.ಮೀ ನಡೆದ ಮಹಿಳೆ ಸಾವು! 
ದೇಶ

ಲಾಕ್ ಡೌನ್ 3.0: ಬಿಸಿಲ ಬೇಗೆ ನಡುವೆ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ಹಿನ್ನೆಲೆ ಊರಿಗೆ ತಲುಪಲು ಕುಟುಂಬ ಸದಸ್ಯರ ಜೊತೆಯಲ್ಲಿ ಕಾಲ್ನಡಿಗೆ ಪ್ರಾರಂಭಿಸಿ ಮೃತಪಟ್ಟ ವರದಿಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.

ಲಾಕ್ ಡೌನ್ ಹಿನ್ನೆಲೆ ಊರಿಗೆ ತಲುಪಲು ಕುಟುಂಬ ಸದಸ್ಯರ ಜೊತೆಯಲ್ಲಿ ಕಾಲ್ನಡಿಗೆ ಪ್ರಾರಂಭಿಸಿ ಮೃತಪಟ್ಟ ವರದಿಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈಗ ಮತ್ತೊಂದು ಪ್ರಕರಣದಲ್ಲಿ ಬಿಸಿಲ ಬೇಗೆ ನಡುವೆಯೇ 200 ಕಿ.ಮೀ ಕಾಲ್ನಡಿಗೆ ಕೈಗೊಂಡಿದ್ದ 21 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. 

ಮಹಾರಾಷ್ಟ್ರದಲ್ಲಿರುವ ರತ್ನಗಿರಿಗೆ ತೆರಳಲು ಕುಟುಂಬ ಸದಸ್ಯರೊಂದಿಗೆ ಈ ಮಹಿಳೆ ಕಾಲ್ನಡಿಗೆ ಪ್ರಾರಂಭಿಸಿದ್ದರು. 230 ಕಿ.ಮೀ ಸಂಚರಿಸಿದ ನಂತರ ಕೊಂಕಣದಲ್ಲಿ ಈಕೆ ಮೃತಪಟ್ಟಿದ್ದಾರೆ. 

ರತ್ನಗಿರಿಗೂ ಕೆಲವೇ ಕೆಲವು ಕಿ.ಮೀ ದೂರದಲ್ಲಿ ಸೋನಾಲಿ ಬುಡಾರೆ ಮೃತಪಟ್ಟಿದ್ದಾರೆ. ವಲಸಿಗ ಕಾರ್ಮಿಕರು ಕಾಲ್ನಡಿಗೆಯಲ್ಲಿ ಊರುಗಳಿಗೆ ತೆರಳಲು ಯತ್ನಿಸಿ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಇದೇ ಮೊದಲೇನಲ್ಲ. ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶಗಳಲ್ಲಿಯೂ ಇಂತಹ ಘಟನೆಗಳು ವರದಿಯಾಗಿದೆ. ಮುಂಬೈ ಒಂದರಲ್ಲೇ 3 ಲಕ್ಷ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕೃಪಾಶಂಕರ್ ಸಿಂಗ್ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT