ರಾಹುಲ್ ಗಾಂಧಿ 
ದೇಶ

ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು: ರಾಹುಲ್ ಗಾಂಧಿ ಆಗ್ರಹ

ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ. 

ನವದೆಹಲಿ: ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ. 

ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು. ಆಡಿಟ್ ಇರಬೇಕು. ಎಷ್ಟು ಹಣವನ್ನು ಸಂಗ್ರಹಿಸಲಾಗಿದೆ, ಮತ್ತು ಅದನ್ನು ಎಲ್ಲಿ ಖರ್ಚು ಮಾಡಲಾಗಿದೆ ಎಂಬುದರ ಜನರಿಗೆ ಸರಿಯಾದ ಮಾಹಿತಿ ಕೊಡಬೇಕು ಎಂದರು. 

ಲೆಕ್ಕಪರಿಶೋಧನೆಯಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇರಬಾರದು! ಎಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಆರೋಗ್ಯಾ ಸೇತು ಆ್ಯಪ್‌ನ ಪಾರದರ್ಶಕತೆ ಕುರಿತು ಅವರು ತಮ್ಮ ಅನುಮಾನಗಳನ್ನು ರಾಹುಲ್ ಮತ್ತೆ ಪುನರುಚ್ಚರಿಸಿದ್ದಾರೆ. ಕೊರೋನ ಸೋಂಕಿನ ಬಿಕ್ಕಟ್ಟಿನ ನಡುವೆ ಜನರಿಗೆ ಸಹಾಯ ಮಾಡಲು ಸರ್ಕಾರವು ಆ್ಯಪ್‌ ಬಳಸುವುದಕ್ಕೆ ಯಾವುದೇ ತೊಂದರೆಗಳಿಲ್ಲ, ಆದರೆ ಪಾರದರ್ಶಕತೆ ಕಾಪಾಡಬೇಕು ಎಂದರು. ಎನ್‌ಡಿಎ ಸರ್ಕಾರವು ಪಿಎಂ ಕೇರ್ಸ್ ಫಂಡ್‌ನ ಲೆಕ್ಕಪರಿಶೋಧನೆಯನ್ನು ತಳ್ಳಿಹಾಕಿದ ನಂತರ ಅವರು ಈ ರಾಹುಲ್ ಇದರ ಬಗ್ಗೆ ಆಗ್ರಹ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT