ರಾಹುಲ್ ಗಾಂಧಿ 
ದೇಶ

ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು: ರಾಹುಲ್ ಗಾಂಧಿ ಆಗ್ರಹ

ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ. 

ನವದೆಹಲಿ: ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ. 

ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು. ಆಡಿಟ್ ಇರಬೇಕು. ಎಷ್ಟು ಹಣವನ್ನು ಸಂಗ್ರಹಿಸಲಾಗಿದೆ, ಮತ್ತು ಅದನ್ನು ಎಲ್ಲಿ ಖರ್ಚು ಮಾಡಲಾಗಿದೆ ಎಂಬುದರ ಜನರಿಗೆ ಸರಿಯಾದ ಮಾಹಿತಿ ಕೊಡಬೇಕು ಎಂದರು. 

ಲೆಕ್ಕಪರಿಶೋಧನೆಯಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇರಬಾರದು! ಎಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಆರೋಗ್ಯಾ ಸೇತು ಆ್ಯಪ್‌ನ ಪಾರದರ್ಶಕತೆ ಕುರಿತು ಅವರು ತಮ್ಮ ಅನುಮಾನಗಳನ್ನು ರಾಹುಲ್ ಮತ್ತೆ ಪುನರುಚ್ಚರಿಸಿದ್ದಾರೆ. ಕೊರೋನ ಸೋಂಕಿನ ಬಿಕ್ಕಟ್ಟಿನ ನಡುವೆ ಜನರಿಗೆ ಸಹಾಯ ಮಾಡಲು ಸರ್ಕಾರವು ಆ್ಯಪ್‌ ಬಳಸುವುದಕ್ಕೆ ಯಾವುದೇ ತೊಂದರೆಗಳಿಲ್ಲ, ಆದರೆ ಪಾರದರ್ಶಕತೆ ಕಾಪಾಡಬೇಕು ಎಂದರು. ಎನ್‌ಡಿಎ ಸರ್ಕಾರವು ಪಿಎಂ ಕೇರ್ಸ್ ಫಂಡ್‌ನ ಲೆಕ್ಕಪರಿಶೋಧನೆಯನ್ನು ತಳ್ಳಿಹಾಕಿದ ನಂತರ ಅವರು ಈ ರಾಹುಲ್ ಇದರ ಬಗ್ಗೆ ಆಗ್ರಹ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ

ಬ್ರಿಕ್ಸ್‌ನಲ್ಲಿ ಪಹಲ್ಗಾಮ್ ದಾಳಿ ಬಗ್ಗೆ ಮಾತ್ರ ಖಂಡನೆ: ಗಾಜಾ ಬಗ್ಗೆ ಮೌನ ಏಕೆ?; ಗೋಳಾಡಿದ ಮೊಹಬೂಬಾ ಮುಫ್ತಿ!