ಸಂಗ್ರಹ ಚಿತ್ರ 
ದೇಶ

30,000 ಕಾರ್ಮಿಕರನ್ನು ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಬಂಗಾಳ ಗ್ರೀನ್ ಸಿಗ್ನಲ್! 

ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ 30,000 ಕಾರ್ಮಿಕರನ್ನು ರಾಜ್ಯಕ್ಕೆ ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 

ಕೋಲ್ಕತ್ತಾ: ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ 30,000 ಕಾರ್ಮಿಕರನ್ನು ರಾಜ್ಯಕ್ಕೆ ವಾಪಸ್ ಕರೆತರಲು 10 ರೈಲುಗಳ ಸಂಚಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 

ತಮಿಳುನಾಡು, ತೆಲಂಗಾಣ, ಕರ್ನಾಟಕ, ಪಂಜಾಬ್ ರಾಜ್ಯಗಳಲ್ಲಿ ಲಾಕ್ ಡೌನ್ ಪರಿಣಾಮ ಪಶ್ಚಿಮ ಬಂಗಾಳದ 30,000 ಕಾರ್ಮಿಕರು ಸಿಲುಕಿಕೊಂಡಿದ್ದು, ಅವರನ್ನು ರಾಜ್ಯಕ್ಕೆ ವಾಪಸ್ ಕರೆತರಬೇಕಿದೆ, ಇದಕ್ಕಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗುವುದು ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಬೇರೆ ಬೇರ ಭಾಗಗಳಲ್ಲಿ ಸಿಲುಕಿಕೊಂಡಿರುವವರ ಪೈಕಿ ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಪ್ರವಾಸಿಗರೂ ಸೇರಿದ್ದಾರೆ. ಯಾವ ಭಾಗಗಳಲ್ಲಿ ಪಶ್ಚಿಮ ಬಂಗಾಳದ ಜನತೆ ಸಿಲುಕಿಕೊಂಡಿದ್ದಾರೋ ಆ ರಾಜ್ಯಗಳ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೇವೆ, ಪಶ್ಚಿಮ ಬಂಗಾಳದಿಂದ ಒಟ್ಟಾರೆ 31,224 ಜನರು ದೇಶದ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ, ಈ ಪೈಕಿ 17,000 ಜನರು ತೆಲಂಗಾಣದಲ್ಲೇ ಸಿಲುಕಿದ್ದಾರೆ ಎಂದು ಪಶ್ಚಿಮ ಬಂಗಾಳದ ಅಧಿಕಾರಿಗಳು ಹೇಳಿದ್ದಾರೆ.

ಮೇ.10 ರಂದು ತೆಲಂಗಾಣಕ್ಕೆ ಮಾಲ್ಡಾದಿಂದ ರೈಲು ಸಂಚರಿಸಲಿದೆ. 7,5000 ಜನರನ್ನು ಕರೆತರಲು ಬೆಂಗಳೂರಿಗೆ ಬೆಂಗಳೂರಿಗೆ ಸಂಚರಿಸಲಿದೆ ಎಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಸ್ಪಷ್ಟಪಡಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT