ವೈದ್ಯನ ಆತ್ಮಹತ್ಯೆ ಪ್ರಕರಣ  ಆಪ್ ಶಾಸಕ ಬಂಧನ 
ದೇಶ

ವೈದ್ಯನ ಆತ್ಮಹತ್ಯೆ ಪ್ರಕರಣ  ಆಪ್ ಶಾಸಕ ಬಂಧನ

ಆಮ್ ಆದ್ಮಿ ಪಕ್ಷದ ಶಾಸಕ ಪ್ರಕಾಶ್ ಜರ್ವಾಲ್ ರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. 

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ಪ್ರಕಾಶ್ ಜರ್ವಾಲ್ ರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. 

ದಕ್ಷಿಣ ದೆಹಲಿ ದುರ್ಗಾ ವಿಹಾರದಲ್ಲಿ ಕಳೆದ ತಿಂಗಳು ವೈದ್ಯರೊಬ್ಬರು ಆತ್ಮಹತ್ಯೆ ಪ್ರಕರಣದಲ್ಲಿ ಪ್ರಕಾಶ್ ಜರ್ವಾಲ್ ಹಾಗೂ  ಅವರ ಸಹಚರ ಕಪಿಲ್ ನಗರ್ ನನ್ನು, ಕೂಡಾ ಪೊಲೀಸರು ಬಂಧಿಸಿದ್ದಾರೆ. 

ಡಾಕ್ಟರ್ ರಾಜೇಂದ್ರ ಸಿಂಗ್ (52) ಏಪ್ರಿಲ್ 18ರಂದು ದುರ್ಗಾ ವಿಹಾರ್ ದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಅವರು ಬರೆದಿರಿಸಿದ್ದ ಆತ್ಮಹತ್ಯೆ ನೋಟ್ ನಲ್ಲಿ, ತಾನು ಜೀವ ಕಳೆದುಕೊಳ್ಳಲು ಕಾರಣ ಶಾಸಕ ಪ್ರಕಾಶ್ ಎಂದು ಬರೆದಿದ್ದರು. ಇದರಿಂದ ಪ್ರಕಾಶ್ ವಿರುದ್ದ ಪ್ರಕರಣ ದಾಖಲಾಗಿದೆ.  

ಒತ್ತಾಯದ ಹಣ ವಸೂಲಿ, ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರೇಪಣೆ ನೀಡಿದೆ ಎಂಬ ಆರೋಪ ಹೊರಿಸಲಾಗಿದೆ. ದೆಹಲಿ  ವಿಧಾನಸಭೆಯ ಸದಸ್ಯರಾಗಿರುವ ಪ್ರಕಾಶ್ ಜರ್ವಾಲ್, ಶುಕ್ರವಾರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಈ ಕುರಿತು ದೆಹಲಿ ಹೈಕೋರ್ಟ್ ಈ ತಿಂಗಳ 11ರಂದು ವಿಚಾರಣೆ ನಡೆಸಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT