ನಕ್ಸಲರಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರ ಮತ್ತು ವಸ್ತುಗಳನ್ನು ಪೊಲೀಸರು ಪರಿಶೀಲಿಸುತ್ತಿರುವುದು 
ದೇಶ

ಛತ್ತೀಸ್ ಗಡ ಎನ್ ಕೌಂಟರ್: ನಾಲ್ವರು ನಕ್ಸಲರ ಹತ್ಯೆ, ಓರ್ವ ಪೊಲೀಸ್ ಅಧಿಕಾರಿ ಹುತಾತ್ಮ

ಛತ್ತೀಸ್ ಗಡದ ರಾಜಾನಂದಗಾಂವ್ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆಯಾಗಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಡಿಎಂ ಅವಸ್ಥಿ ತಿಳಿಸಿದ್ದಾರೆ.

ರಾಯಪುರ: ಛತ್ತೀಸ್ ಗಡದ ರಾಜಾನಂದಗಾಂವ್ ಜಿಲ್ಲೆಯಲ್ಲಿ ಕಳೆದ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರ ಹತ್ಯೆಯಾಗಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಡಿಎಂ ಅವಸ್ಥಿ ತಿಳಿಸಿದ್ದಾರೆ.

ರಾಜಾನಂದಗಾಂವ್‌ನ ಮದನ್ವಾಡ ಪ್ರದೇಶದ ಕಾಡುಗಳಲ್ಲಿ ನಕ್ಸಲರು ಇರುವ ಬಗ್ಗೆ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿದ್ದರು. ಈ ಮಧ್ಯೆ ನಕ್ಸಲರು ವಿವೇಚನೆಯಿಲ್ಲದೆ ಗುಂಡು ಹಾರಿಸಲು ಪ್ರಾರಂಭಿಸಿದರು.

ಭದ್ರತಾ ಪಡೆಗಳು ನಕ್ಸಲರ ಮೇಲೆ ಗುಂಡು ಹಾರಿಸಿ ಪ್ರತಿದಾಳಿ ನಡೆಸಿದವು. ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವಿನ ಸುದೀರ್ಘ ಚಕಮಕಿಯ ಬಳಿಕ ಮದನ್ವಾಡಾ ಎಸ್‌ಎಚ್‌ಒ ಶ್ಯಾಮ್ ಕಿಶೋರ್ ಶರ್ಮಾ ಅವರು ಗುಂಡೇಟಿನಿಂದ ಗಾಯಗೊಂಡು ಹುತಾತ್ಮರಾಗಿದ್ದಾರೆ.

ಮೃತ ನಾಲ್ವರು ನಕ್ಸಲೈಟ್‌ಗಳಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಪೊಲೀಸರು ಒಂದು ಎಕೆ 47 ರೈಫಲ್, ಒಂದು ಎಸ್‌ಎಲ್‌ಆರ್ ಮತ್ತು 12 ಬೋರ್ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ನಕ್ಸಲೈಟ್ ಹಿಂಸಾಚಾರದಿಂದ ಮದನ್ವಾಡಾ ಹೆಚ್ಚು ಪರಿಣಾಮ ಬೀರಿದೆ. ಈ ಪ್ರದೇಶವು 2009 ರಲ್ಲಿ ದೇಶದಲ್ಲಿ ಹೆಚ್ಚು ಸುದ್ದಿಗೆ ಬಂದಿದ್ದು, ಆಗಿನ ರಾಜನಂದಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 29 ಪೊಲೀಸ್ ಸಿಬ್ಬಂದಿ ನಕ್ಸಲರರೊಂದಿಗಿನ ಮುಖಾಮುಖಿಯಲ್ಲಿ ಕೊಲ್ಲಲ್ಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT