ಜನರ ಪ್ರತಿಭಟನೆ 
ದೇಶ

ಕಾರ್ಖಾನೆ ಸ್ಥಳಾಂತರಕ್ಕೆ ಒತ್ತಾಯಿಸಿ ವಿಶಾಖಪಟ್ಟಣಂನಲ್ಲಿ ಗ್ರಾಮಸ್ಥರ ಪ್ರತಿಭಟನೆ

ಅನಿಲ ಸೋರಿಕೆ ಉಂಟಾಗಿ ಹಲವು ಜನರ ಸಾವಿಗೆ ಕಾರಣವಾದ ಎಲ್ ಜಿ ಪಾಲಿಮರ್ಸ್ ಕೈಗಾರಿಕಾ ಘಟಕವನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ಅಕ್ಕಪಕ್ಕದ ಹಳ್ಳಿಗಳ ನೂರಾರು ಮಂದಿ ಮೊನ್ನೆಯ ದುರ್ಘಟನೆಯಲ್ಲಿ ಸತ್ತ ವ್ಯಕ್ತಿಯ ಶವವನ್ನು ತಂದು ಕಾರ್ಖಾನೆ ಮುಂದೆ ಪ್ರತಿಭಟವನೆ ಮಾಡಿದರು.

ವಿಶಾಖಪಟ್ಟಣಂ: ಅನಿಲ ಸೋರಿಕೆ ಉಂಟಾಗಿ ಹಲವು ಜನರ ಸಾವಿಗೆ ಕಾರಣವಾದ ಎಲ್ ಜಿ ಪಾಲಿಮರ್ಸ್ ಕೈಗಾರಿಕಾ ಘಟಕವನ್ನು ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ಅಕ್ಕಪಕ್ಕದ ಹಳ್ಳಿಗಳ ನೂರಾರು ಮಂದಿ ಮೊನ್ನೆಯ ದುರ್ಘಟನೆಯಲ್ಲಿ ಸತ್ತ ವ್ಯಕ್ತಿಯ ಶವವನ್ನು ತಂದು ಕಾರ್ಖಾನೆ ಮುಂದೆ ಪ್ರತಿಭಟವನೆ ಮಾಡಿದರು.

ಈ ಹಠಾತ್ ಘಟನೆಯಿಂದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರನ್ನು ಹಿಂದಕ್ಕೆ ಕಳುಹಿಸಲು ಪ್ರಯತ್ನಿಸಿದರು. ಇಂದಿನ ಪ್ರತಿಭಟನೆಯಲ್ಲಿ ಬಹುತೇಕರು ಯುವಕರಿದ್ದರು. ಅನಿಲ ಸೋರಿಕೆಯಾಗಿರುವ ಪ್ರದೇಶವನ್ನು ಸದ್ಯ ನಿಷೇಧಾಜ್ಞೆಯ ಪ್ರದೇಶವೆಂದು ಗುರುತಿಸಲಾಗಿದೆ.

ಪ್ರತಿಭಟನಾಕಾರರು ಹಿಂದಕ್ಕೆ ಹೋಗಲು ನಿರಾಕರಿಸಿದಾಗ ಪೊಲೀಸರು ಕೆಲವರನ್ನು ಬಂಧಿಸಿದ ಘಟನೆ ಕೂಡ ನಡೆಯಿತು. ಆದರೆ ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ವಿಫಲರಾದರು. ಪ್ರತಿಭಟನಾ ನಿರತ ಯುವಕರ ಗುಂಪು ಕಾರ್ಖಾನೆ ಬಳಿ ಬಂದು ವ್ಯವಸ್ಥಾಪಕರ ವಿರುದ್ಧ ಘೋಷಣೆ ಕೂಗಿದರು.

ಮೃತ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿದರೆ ಸಾಕಾಗುವುದಿಲ್ಲ, ಕಾರ್ಖಾನೆಯನ್ನು ಇಲ್ಲಿಂದ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿದರು. ಎಲ್ ಜಿ ಪಾಲಿಮರ್ಸ್ ಕಾರ್ಖಾನೆಯ ಮಾಲೀಕರು ಜನರ ಬಗ್ಗೆ ಯಾವುದೇ ಕಾಳಜಿ ಹೊಂದಿಲ್ಲ. ಅನಿಲ ಸೋರಿಕೆಯಾಗುವ ಸಂದರ್ಭದಲ್ಲಿ ಕೂಡ ಜನರಿಗೆ ಎಚ್ಚರಿಕೆ ನೀಡಲಿಲ್ಲ ಎಂದು ಆರೋಪಿಸಿದರು.

ವೆಂಕಟಾಪುರಂ ಹೊರತುಪಡಿಸಿ ಬೇರೆ ಗ್ರಾಮಗಳ ಜನರು ಮನೆಗಳಲ್ಲಿ ಒಬ್ಬ ಪುರುಷರನ್ನು ರಕ್ಷಣೆಗೆಂದು ಇರಿಸಿ ಬೇರೆಲ್ಲರೂ ತೊರೆಯಬೇಕಾದ ಪರಿಸ್ಥಿತಿ ಬಂದಿದೆ. ಇದಕ್ಕೆ ಯಾರು ಕಾರಣರು, ಕುಡಿಯಲು ನೀರು ಸಹ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸದ್ಯ ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT