ಸಂಗ್ರಹ ಚಿತ್ರ 
ದೇಶ

ಕೊರೋನಾ ಜೊತೆಗೆ ಬದುಕಲು ಕಲಿಯಿರಿ: ದೇಶವಾಸಿಗಳಿಗೆ ಕೇಂದ್ರ ಸಲಹೆ

ಕೊರೋನಾ ವೈರಸ್ ನಿಗ್ರಹಕ್ಕಾಗಿ ಘೋಷಿಸಲಾಗಿರುವ ಲಾಕ್'ಡೌನ್ ಸಡಿಲಗೊಂಡ ಬಳಿಕ ವೈರಸ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುಾಗಲೇ ವೈರಸ್ ಜೊತೆಗೆ ಬದುಕೋದು ಕಲಿಯಿರಿ ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಸಲಹೆ ನೀಡಿದೆ. 

ನವದೆಹಲಿ: ಕೊರೋನಾ ವೈರಸ್ ನಿಗ್ರಹಕ್ಕಾಗಿ ಘೋಷಿಸಲಾಗಿರುವ ಲಾಕ್'ಡೌನ್ ಸಡಿಲಗೊಂಡ ಬಳಿಕ ವೈರಸ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವಾಗಲೇ ವೈರಸ್ ಜೊತೆಗೆ ಬದುಕೋದು ಕಲಿಯಿರಿ ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಸಲಹೆ ನೀಡಿದೆ. 

ಇದು ಅಚ್ಚರಿಗೆ ಕಾರಣವಾಗಿದ್ದು, ಮೇ.17ರ ನಂತರ ಲಾಕ್'ಡೌನ್ ವಿಸ್ತರಣೆಯಾಗುವುದಿಲ್ಲ ಎಂಬ ಸುಳಿವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ನಾವೆಲ್ಲರೂ ವೈರಸ್ ಜೊತೆಗೆ ಬದುಕಬೇಕಾದ ಬಹುದೊಡ್ಡ ಸವಾಲು ಮುಂದಿದೆ. ಈ ರೀತಿ ಮಾಡಲು ಸರ್ಕಾರದ ಮಾರ್ಗಸೂಚಿಗಳನ್ನು ನಡವಳಿಕೆಯಲ್ಲೇ ಬದಲಾವಣೆ ಮಾಡಿಕೊಳ್ಳುವಂತೆ ಅಳವಡಿಸಿಕೊಳ್ಳುವುದು ತುಂಬಾ ಮಹತ್ವವಾದದ್ದು ಎಂದು ತಿಳಿಸಿದ್ದಾರೆ. 

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕೂಡ ಇದೇ ರೀತಿಯ ಮಾತನ್ನು ಇತ್ತೀಚೆಗೆ ಆಡಿದ್ದರು. ದೆಹಲಿಯನ್ನು ಪುನಾ ತೆರೆಯುವ ಸಮಯ ಬಂದಿದೆ. ಹೀಗಾಗಿ ವೈರಸ್ ಜೊತೆಗೆ ಜನರು ಬದುಕಬೇಕು ಎಂದಿದ್ದರು. 

ದೇಶದ 216 ಜಿಲ್ಲೆಗಳಲ್ಲಿ ಈ ವರೆಗೆ ಒಂದೇ ಒಂದು ಕೊರೋನಾ ಕೇಸ್ ಪತ್ತೆಯಾಗಿಲ್ಲ. ಕಳೆದ 28 ದಿನಗಳಿಂದ 48 ಜಿಲ್ಲೆಗಳಲ್ಲಿ ಹೊಸದಾಗಿ ಸೋಂಕು ಕಂಡು ಬಂದಿಲ್ಲ. ಸರ್ಕಾರ ನೀಡಿರುವ ಸೂಚನೆಗಳನ್ನು ಪಾಲಿಸಿದರೆ ಈ ವೈರಸ್ ಉತ್ತುಂಗಕ್ಕೆ ಹೋಗುವುದನ್ನು ತಪ್ಪಿಸಬಹುದು ಎಂದು ಅಗರ್ವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT