ಸಂಗ್ರಹ ಚಿತ್ರ 
ದೇಶ

ಕೊರೋನಾ ಜೊತೆಗೆ ಬದುಕಲು ಕಲಿಯಿರಿ: ದೇಶವಾಸಿಗಳಿಗೆ ಕೇಂದ್ರ ಸಲಹೆ

ಕೊರೋನಾ ವೈರಸ್ ನಿಗ್ರಹಕ್ಕಾಗಿ ಘೋಷಿಸಲಾಗಿರುವ ಲಾಕ್'ಡೌನ್ ಸಡಿಲಗೊಂಡ ಬಳಿಕ ವೈರಸ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುಾಗಲೇ ವೈರಸ್ ಜೊತೆಗೆ ಬದುಕೋದು ಕಲಿಯಿರಿ ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಸಲಹೆ ನೀಡಿದೆ. 

ನವದೆಹಲಿ: ಕೊರೋನಾ ವೈರಸ್ ನಿಗ್ರಹಕ್ಕಾಗಿ ಘೋಷಿಸಲಾಗಿರುವ ಲಾಕ್'ಡೌನ್ ಸಡಿಲಗೊಂಡ ಬಳಿಕ ವೈರಸ್ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವಾಗಲೇ ವೈರಸ್ ಜೊತೆಗೆ ಬದುಕೋದು ಕಲಿಯಿರಿ ಎಂದು ಕೇಂದ್ರ ಸರ್ಕಾರ ದೇಶವಾಸಿಗಳಿಗೆ ಸಲಹೆ ನೀಡಿದೆ. 

ಇದು ಅಚ್ಚರಿಗೆ ಕಾರಣವಾಗಿದ್ದು, ಮೇ.17ರ ನಂತರ ಲಾಕ್'ಡೌನ್ ವಿಸ್ತರಣೆಯಾಗುವುದಿಲ್ಲ ಎಂಬ ಸುಳಿವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ನಾವೆಲ್ಲರೂ ವೈರಸ್ ಜೊತೆಗೆ ಬದುಕಬೇಕಾದ ಬಹುದೊಡ್ಡ ಸವಾಲು ಮುಂದಿದೆ. ಈ ರೀತಿ ಮಾಡಲು ಸರ್ಕಾರದ ಮಾರ್ಗಸೂಚಿಗಳನ್ನು ನಡವಳಿಕೆಯಲ್ಲೇ ಬದಲಾವಣೆ ಮಾಡಿಕೊಳ್ಳುವಂತೆ ಅಳವಡಿಸಿಕೊಳ್ಳುವುದು ತುಂಬಾ ಮಹತ್ವವಾದದ್ದು ಎಂದು ತಿಳಿಸಿದ್ದಾರೆ. 

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕೂಡ ಇದೇ ರೀತಿಯ ಮಾತನ್ನು ಇತ್ತೀಚೆಗೆ ಆಡಿದ್ದರು. ದೆಹಲಿಯನ್ನು ಪುನಾ ತೆರೆಯುವ ಸಮಯ ಬಂದಿದೆ. ಹೀಗಾಗಿ ವೈರಸ್ ಜೊತೆಗೆ ಜನರು ಬದುಕಬೇಕು ಎಂದಿದ್ದರು. 

ದೇಶದ 216 ಜಿಲ್ಲೆಗಳಲ್ಲಿ ಈ ವರೆಗೆ ಒಂದೇ ಒಂದು ಕೊರೋನಾ ಕೇಸ್ ಪತ್ತೆಯಾಗಿಲ್ಲ. ಕಳೆದ 28 ದಿನಗಳಿಂದ 48 ಜಿಲ್ಲೆಗಳಲ್ಲಿ ಹೊಸದಾಗಿ ಸೋಂಕು ಕಂಡು ಬಂದಿಲ್ಲ. ಸರ್ಕಾರ ನೀಡಿರುವ ಸೂಚನೆಗಳನ್ನು ಪಾಲಿಸಿದರೆ ಈ ವೈರಸ್ ಉತ್ತುಂಗಕ್ಕೆ ಹೋಗುವುದನ್ನು ತಪ್ಪಿಸಬಹುದು ಎಂದು ಅಗರ್ವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT