ದೇಶ

ತಮಿಳುನಾಡು: 14 ವರ್ಷದ ಶಾಲಾ ಬಾಲಕಿಯನ್ನು ಜೀವಂತವಾಗಿ ಸುಟ್ಟು ಹಾಕಿದ ದುಷ್ಕರ್ಮಿಗಳು

Lingaraj Badiger

ಚೆನ್ನೈ: ತಮಿಳುನಾಡಿನಲ್ಲಿ ಆಡಳಿತರೂಢ ಎಐಎಡಿಎಂಕೆಗೆ ಸೇರಿದ ಇಬ್ಬರು ದುಷ್ಕರ್ಮಿಗಳು 14
ವರ್ಷದ ಶಾಲಾ ಬಾಲಕಿಯನ್ನು ಜೀವಂತವಾಗಿ ಸುಟ್ಟ ಅಮಾನವೀಯ ಘಟನೆ ವಿಲ್ಲುಪುರಂ ಜಿಲ್ಲೆಯಲ್ಲಿ
ನಡೆದಿದೆ.

ಭಾನುವಾರ ಸಿರುಮದುರೈ ಕಾಲೋನಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಬಾಲಕಿ ಜಯಶ್ರೀ
ಶೇ.95 ರಷ್ಟು ಸುಟ್ಟ ಗಾಯಗಳಿಂದಾಗಿ ಸೋಮವಾರ ಮೃತಪಟ್ಟಿದ್ದಾರೆ.

ದುಷ್ಕರ್ಮಿಗಳು ತಂದೆ ಜಯಪಾಲ್ ಮೇಲಿನ ದ್ವೇಷದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು,
ನಿನ್ನೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ, ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಲಕಿಯ ಕೈ,ಕಾಲು
ಕಟ್ಟಿಹಾಕಿ, ಬಾಯಿಗೆ ಬಟ್ಟೆ ತೂರಿಕೆ ಬೆಂಕಿ ಹಚ್ಚಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶೀಘ್ರ ತನಿಖೆಯಾಗಬೇಕು ಮತ್ತು ಮಾಜಿ ನಗರಪಾಲಿಕೆ ಸದಸ್ಯ
ಸೇರಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪ್ರತಿಪಕ್ಷ ಡಿಎಂಕೆ ಮುಖ್ಯಸ್ಥ
ಎಂ.ಕೆ.ಸ್ಟಾಲಿನ್ ಅವರು ಒತ್ತಾಯಿಸಿದ್ದಾರೆ.

ಶೇ. 95ರಷ್ಟು ಸುಟ್ಟ ಗಾಯಗಳಾಗಿದ್ದ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬಾಲಕಿ ಸಾಯುವ ಮುನ್ನ ಎಐಎಡಿಎಂಕೆಗೆ ಸೇರಿದ ಇಬ್ಬರು ಆರೋಪಿಗಳ ಹೆಸರನ್ನು ಹೇಳಿದ್ದಾರೆ
ಎಂದು ಸ್ಟಾಲಿನ್ ತಿಳಿಸಿದ್ದಾರೆ.

SCROLL FOR NEXT