ಸಾಂದರ್ಭಿಕ ಚಿತ್ರ 
ದೇಶ

ಹೊಸ ಮಾರ್ಗಸೂಚಿ: ಕೊವಿಡ್-19 ರೋಗಿಗಳ ಹೋಮ್ ಕ್ವಾರಂಟೈನ್ 17 ದಿನಕ್ಕೆ ಅಂತ್ಯ

ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಕೇಂದ್ರ ಸರ್ಕಾರ ಸೋಮವಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರೋಗ ಲಕ್ಷಣಗಳು ಅಥವಾ ಕೊಡಿವ್-19 ಪರೀಕ್ಷೆಯ ದಿನಾಂಕದಿಂದ 17 ದಿನಗಳ ನಂತರ ಹೋಮ್ ಕ್ವಾರಂಟೈನ್ ಕೊನೆಗೊಳಿಸಬಹುದು ಮತ್ತು ಮತ್ತೆ ಕೊವಿಡ್-19 ಪರೀಕ್ಷಿಸದೆ 10 ದಿನಗಳವರೆಗೆ ಜ್ವರವಿಲ್ಲದಿದ್ದರೆ ಹೋಮ್ ಕ್ವಾರಂಟೈನ್ ನಿಂದ ಹೊರ ಬರಬಹುದು ಎಂದು ಹೇಳಿದೆ.

ನವದೆಹಲಿ: ಕೊರೋನಾ ವೈರಸ್ ಸೋಂಕಿತ ರೋಗಿಗಳಿಗೆ ಕೇಂದ್ರ ಸರ್ಕಾರ ಸೋಮವಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರೋಗ ಲಕ್ಷಣಗಳು ಅಥವಾ ಕೊಡಿವ್-19 ಪರೀಕ್ಷೆಯ ದಿನಾಂಕದಿಂದ 17 ದಿನಗಳ ನಂತರ ಹೋಮ್ ಕ್ವಾರಂಟೈನ್ ಕೊನೆಗೊಳಿಸಬಹುದು ಮತ್ತು ಮತ್ತೆ ಕೊವಿಡ್-19 ಪರೀಕ್ಷಿಸದೆ 10 ದಿನಗಳವರೆಗೆ ಜ್ವರವಿಲ್ಲದಿದ್ದರೆ ಹೋಮ್ ಕ್ವಾರಂಟೈನ್ ನಿಂದ ಹೊರ ಬರಬಹುದು ಎಂದು ಹೇಳಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಇಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,  ಪೂರ್ವ-ರೋಗಲಕ್ಷಣ ಅಥವಾ ತುಂಬಾ ಸೌಮ್ಯವಾದ ರೋಗ ಲಕ್ಷಣಗಳನ್ನು ಹೊಂದಿರುವವರು, ಕುಟುಂಬದ ಇತರ ಸದಸ್ಯರೊಂದಿಗೆ ಸಂಪರ್ಕವನ್ನು ತಪ್ಪಿಸಲು ತಮ್ಮ ನಿವಾಸದಲ್ಲಿ ಅಗತ್ಯವಾದ ಸ್ವಯಂ-ಪ್ರತ್ಯೇಕತೆಯ ಸೌಲಭ್ಯವನ್ನು ಹೊಂದಿದ್ದರೆ ಮನೆಯ ಪ್ರತ್ಯೇಕತೆಯನ್ನು ಆರಿಸಿಕೊಳ್ಳಬಹುದು ಎಂದು ಸ್ಪಷ್ಪಪಡಿಸಿದೆ.

ವೈದ್ಯಕೀಯ ಅಧಿಕಾರಿಯಿಂದ ರೋಗಿಯನ್ನು ಪ್ರಾಯೋಗಿಕವಾಗಿ ಅತ್ಯಂತ ಸೌಮ್ಯವಾದ ಪ್ರಕರಣ ಅಥವಾ ರೋಗಲಕ್ಷಣದ ಪೂರ್ವದ ಪ್ರಕರಣ ಎಂದು ಘೋಷಿಸಬೇಕು ಮತ್ತು ಕಣ್ಗಾವಲು ತಂಡಗಳು ಮುಂದಿನ ಅನುಸರಣೆಗೆ ನಿಯಮಿತವಾಗಿ ಅವರ ಆರೋಗ್ಯ ಸ್ಥಿತಿಯನ್ನು ಜಿಲ್ಲಾ ಕಣ್ಗಾವಲು ಅಧಿಕಾರಿಗೆ ತಿಳಿಸಬೇಕು.

"ಹೋಮ್ ಕ್ವಾರಂಟೈನ್ ಅಡಿಯಲ್ಲಿರುವ ರೋಗಿಯು ರೋಗಲಕ್ಷಣಗಳು ಪ್ರಾರಂಭವಾದ 17 ದಿನಗಳ ನಂತರ ಮತ್ತು 10 ದಿನಗಳವರೆಗೆ ಜ್ವರವಿಲ್ಲದ ನಂತರ ಮನೆಯ ಪ್ರತ್ಯೇಕತೆಯನ್ನು ಕೊನೆಗೊಳಿಸಬಹುದು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT