ಎಫ್ ಐಸಿಸಿಐ ಅಧ್ಯಕ್ಷೆ ಸಂಗೀತಾ ರೆಡ್ಡಿ 
ದೇಶ

10 ಲಕ್ಷ ಕೋಟಿ ರೂ. ಪ್ರೋತ್ಸಾಹಕ ಧನ ನೀಡುವಂತೆ ಎಫ್ ಐಸಿಸಿಐ ಒತ್ತಾಯ!

ದೀರ್ಘಕಾಲೀನ ಆರ್ಥಿಕ ಕುಸಿತವನ್ನು ತಪ್ಪಿಸಲು ಬೇಡಿಕೆ ಮತ್ತು ಪೂರೈಕೆಯನ್ನು ಪ್ರೋತ್ಸಾಹಿಸಲು 9 ರಿಂದ  10 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇಕಡಾ ನಾಲ್ಕರಿಂದ ಐದರಷ್ಟು ಪ್ರೋತ್ಸಾಹಕದ ಅವಶ್ಯಕತೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾ ಒಕ್ಕೂಟ - ಎಫ್ ಐಸಿಸಿಐ ಒತ್ತಾಯಿಸಿದೆ.

ನವದೆಹಲಿ: ದೀರ್ಘಕಾಲೀನ ಆರ್ಥಿಕ ಕುಸಿತವನ್ನು ತಪ್ಪಿಸಲು ಬೇಡಿಕೆ ಮತ್ತು ಪೂರೈಕೆಯನ್ನು ಪ್ರೋತ್ಸಾಹಿಸಲು 9 ರಿಂದ 10 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇಕಡಾ ನಾಲ್ಕರಿಂದ ಐದರಷ್ಟು ಪ್ರೋತ್ಸಾಹಕದ ಅವಶ್ಯಕತೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾ ಒಕ್ಕೂಟ - ಎಫ್ ಐಸಿಸಿಐ ಒತ್ತಾಯಿಸಿದೆ.

ಬೃಹತ್ ಮತ್ತು ಸಣ್ಣ ಉದ್ಯಮಗಳಿಗೆ ನೆರವು ನೀಡದಿದ್ದರೆ ಭಾರೀ ಪ್ರಮಾಣದ ಉದ್ಯೋಗ ನಷ್ಟವಾಗಲಿದೆ. ಅದು ಬೇಡಿಕೆಯನ್ನು ಗಮನಾರ್ಹವಾಗಿ ಸಂಕುಚಿತಗೊಳಿಸುತ್ತದೆ ಮತ್ತು ವ್ಯವಹಾರಗಳ ಬಳಕೆ ಮತ್ತು ಅವುಗಳ ದ್ರವ್ಯತೆಯ ಮೇಲೆ ಹೆಚ್ಚಿನ ಒತ್ತಡಕ್ಕೆ ಕಾರಣವಾಗುತ್ತದೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಸಂಗೀತಾ ರೆಡ್ಡಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಆರ್ಥಿಕ ಚಟುವಟಿಕೆಗಳು ಪುನರ್ ಆರಂಭಗೊಳ್ಳದಿದ್ದರೆ ವಿತ್ತೀಯ ಕೊರತೆ ಹಾಗೂ ಸರ್ಕಾರದ ತೆರಿಗೆ ಸಂಗ್ರಹದ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂದು ಅವರು ಹೇಳಿದ್ದಾರೆ. 

ದೊಡ್ಡ ಪ್ರಮಾಣದ ಉದ್ಯೋಗ ನಷ್ಟ ಮತ್ತು ಜನತೆಯ ಲಾಭಾಂಶ ನಷ್ಟದಿಂದಾಗುವ  ಸಾಮಾಜಿಕ-ಆರ್ಥಿಕ ಪರಿಣಾಮವು ಮಧ್ಯಮ ಅವಧಿಯಲ್ಲಿಯೂ ಸಹ ಭವಿಷ್ಯದ ಆರ್ಥಿಕ ಅಭಿವೃದ್ಧಿಯ ಹಾದಿಯನ್ನು ಪರಿಣಾಮ ಬೀರಲಿದೆ.ಆರ್ಥಿಕ ಚಟುವಟಿಕೆಗಳನ್ನು ಪುನರ್ ಆರಂಭಿಸದಿದ್ದರೆ ಧೀಘ ಕಾಲೀನ ಆರ್ಥಿಕ ಕುಸಿತದ ಮೇಲೆ ಪರಿಣಾಮ ಬೀರಲಿದ್ದು, ಕೂಡಲೇ ಕೂಡಲೇ ಪ್ರೋತ್ಸಾಹಕಗಳನ್ನು ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. 

ಅತಿಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ಒಂದು ವರ್ಷದವರೆವಿಗೂ ಬಡ್ಡಿ ರಹಿತ ಸಾಲ ನೀಡಬೇಕು. ಒಂದು ವೇಳೆ ಸರ್ಕಾರ ಎಂಎಸ್ ಎಂಇ ವ್ಯವಹಾರಗಳಿಗೆ 1 ಲಕ್ಷ ಕೋಟಿ ಸಾಲ ನೀಡಿದ್ದರೂ  8 ಸಾವಿರ ಕೋಟಿ ಬಡ್ಡಿ ವೆಚ್ಚವನ್ನು ಪಾವತಿಸಬೇಕಾಗುತ್ತದೆ. ಶೇ. 0.04 ರಷ್ಟು ಜಿಡಿಪಿ ಇರಲಿದೆ. ಕೆಲಸಗಾರರನ್ನು ತೆಗೆದುಹಾಕುವುದಿಲ್ಲ, ಕೈಗಾರಿಕೆಗಳನ್ನು ಮುಂದುವರೆಸುವುದಾಗಿ ಷರತ್ತಿನೊಂದಿಗೆ ಈ ಸಾಲವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT