ಎಫ್ ಐಸಿಸಿಐ ಅಧ್ಯಕ್ಷೆ ಸಂಗೀತಾ ರೆಡ್ಡಿ 
ದೇಶ

10 ಲಕ್ಷ ಕೋಟಿ ರೂ. ಪ್ರೋತ್ಸಾಹಕ ಧನ ನೀಡುವಂತೆ ಎಫ್ ಐಸಿಸಿಐ ಒತ್ತಾಯ!

ದೀರ್ಘಕಾಲೀನ ಆರ್ಥಿಕ ಕುಸಿತವನ್ನು ತಪ್ಪಿಸಲು ಬೇಡಿಕೆ ಮತ್ತು ಪೂರೈಕೆಯನ್ನು ಪ್ರೋತ್ಸಾಹಿಸಲು 9 ರಿಂದ  10 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇಕಡಾ ನಾಲ್ಕರಿಂದ ಐದರಷ್ಟು ಪ್ರೋತ್ಸಾಹಕದ ಅವಶ್ಯಕತೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾ ಒಕ್ಕೂಟ - ಎಫ್ ಐಸಿಸಿಐ ಒತ್ತಾಯಿಸಿದೆ.

ನವದೆಹಲಿ: ದೀರ್ಘಕಾಲೀನ ಆರ್ಥಿಕ ಕುಸಿತವನ್ನು ತಪ್ಪಿಸಲು ಬೇಡಿಕೆ ಮತ್ತು ಪೂರೈಕೆಯನ್ನು ಪ್ರೋತ್ಸಾಹಿಸಲು 9 ರಿಂದ 10 ಲಕ್ಷ ಕೋಟಿ ಅಥವಾ ಜಿಡಿಪಿಯ ಶೇಕಡಾ ನಾಲ್ಕರಿಂದ ಐದರಷ್ಟು ಪ್ರೋತ್ಸಾಹಕದ ಅವಶ್ಯಕತೆ ಇದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾ ಒಕ್ಕೂಟ - ಎಫ್ ಐಸಿಸಿಐ ಒತ್ತಾಯಿಸಿದೆ.

ಬೃಹತ್ ಮತ್ತು ಸಣ್ಣ ಉದ್ಯಮಗಳಿಗೆ ನೆರವು ನೀಡದಿದ್ದರೆ ಭಾರೀ ಪ್ರಮಾಣದ ಉದ್ಯೋಗ ನಷ್ಟವಾಗಲಿದೆ. ಅದು ಬೇಡಿಕೆಯನ್ನು ಗಮನಾರ್ಹವಾಗಿ ಸಂಕುಚಿತಗೊಳಿಸುತ್ತದೆ ಮತ್ತು ವ್ಯವಹಾರಗಳ ಬಳಕೆ ಮತ್ತು ಅವುಗಳ ದ್ರವ್ಯತೆಯ ಮೇಲೆ ಹೆಚ್ಚಿನ ಒತ್ತಡಕ್ಕೆ ಕಾರಣವಾಗುತ್ತದೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಸಂಗೀತಾ ರೆಡ್ಡಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಆರ್ಥಿಕ ಚಟುವಟಿಕೆಗಳು ಪುನರ್ ಆರಂಭಗೊಳ್ಳದಿದ್ದರೆ ವಿತ್ತೀಯ ಕೊರತೆ ಹಾಗೂ ಸರ್ಕಾರದ ತೆರಿಗೆ ಸಂಗ್ರಹದ ಮೇಲೆ ಮಹತ್ವದ ಪರಿಣಾಮ ಬೀರಲಿದೆ ಎಂದು ಅವರು ಹೇಳಿದ್ದಾರೆ. 

ದೊಡ್ಡ ಪ್ರಮಾಣದ ಉದ್ಯೋಗ ನಷ್ಟ ಮತ್ತು ಜನತೆಯ ಲಾಭಾಂಶ ನಷ್ಟದಿಂದಾಗುವ  ಸಾಮಾಜಿಕ-ಆರ್ಥಿಕ ಪರಿಣಾಮವು ಮಧ್ಯಮ ಅವಧಿಯಲ್ಲಿಯೂ ಸಹ ಭವಿಷ್ಯದ ಆರ್ಥಿಕ ಅಭಿವೃದ್ಧಿಯ ಹಾದಿಯನ್ನು ಪರಿಣಾಮ ಬೀರಲಿದೆ.ಆರ್ಥಿಕ ಚಟುವಟಿಕೆಗಳನ್ನು ಪುನರ್ ಆರಂಭಿಸದಿದ್ದರೆ ಧೀಘ ಕಾಲೀನ ಆರ್ಥಿಕ ಕುಸಿತದ ಮೇಲೆ ಪರಿಣಾಮ ಬೀರಲಿದ್ದು, ಕೂಡಲೇ ಕೂಡಲೇ ಪ್ರೋತ್ಸಾಹಕಗಳನ್ನು ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. 

ಅತಿಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವಲಯದ ಕೈಗಾರಿಕೆಗಳಿಗೆ ಒಂದು ವರ್ಷದವರೆವಿಗೂ ಬಡ್ಡಿ ರಹಿತ ಸಾಲ ನೀಡಬೇಕು. ಒಂದು ವೇಳೆ ಸರ್ಕಾರ ಎಂಎಸ್ ಎಂಇ ವ್ಯವಹಾರಗಳಿಗೆ 1 ಲಕ್ಷ ಕೋಟಿ ಸಾಲ ನೀಡಿದ್ದರೂ  8 ಸಾವಿರ ಕೋಟಿ ಬಡ್ಡಿ ವೆಚ್ಚವನ್ನು ಪಾವತಿಸಬೇಕಾಗುತ್ತದೆ. ಶೇ. 0.04 ರಷ್ಟು ಜಿಡಿಪಿ ಇರಲಿದೆ. ಕೆಲಸಗಾರರನ್ನು ತೆಗೆದುಹಾಕುವುದಿಲ್ಲ, ಕೈಗಾರಿಕೆಗಳನ್ನು ಮುಂದುವರೆಸುವುದಾಗಿ ಷರತ್ತಿನೊಂದಿಗೆ ಈ ಸಾಲವನ್ನು ನೀಡಬಹುದು ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT