ದೆಹಲಿ ವಿಮಾನ ನಿಲ್ದಾಣ 
ದೇಶ

ಲಾಕ್ ಡೌನ್: ಮಾ.18ರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಜರ್ಮನ್ ವ್ಯಕ್ತಿಯ ಜೀವನ!

ಜೀವನದ ನಿಜವಾದ ಟರ್ಮಿನಲ್ ಎಂದರೇ ಇದೇ ಇರಬೇಕು. ತನ್ನ ದೇಶದಲ್ಲಿ ಅಪರಾಧ ಹಿನ್ನಲೆ ಹೊಂದಿರುವ ಜರ್ಮನಿ ಮೂಲದ ವ್ಯಕ್ತಿಯೊಬ್ಬರು ಕೊವಿಡ್-19 ಲಾಕ್ ಡೌನ್ ಪರಿಣಾಮ ಕಳೆದ ಮಾರ್ಚ್ 18ರಿಂದ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಜೀವನ ನಡೆಸುತ್ತಿದ್ದಾರೆ.

ನವದೆಹಲಿ: ಜೀವನದ ನಿಜವಾದ ಟರ್ಮಿನಲ್ ಎಂದರೇ ಇದೇ ಇರಬೇಕು. ತನ್ನ ದೇಶದಲ್ಲಿ ಅಪರಾಧ ಹಿನ್ನಲೆ ಹೊಂದಿರುವ ಜರ್ಮನಿ ಮೂಲದ ವ್ಯಕ್ತಿಯೊಬ್ಬರು ಕೊವಿಡ್-19 ಲಾಕ್ ಡೌನ್ ಪರಿಣಾಮ ಕಳೆದ ಮಾರ್ಚ್ 18ರಿಂದ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಜೀವನ ನಡೆಸುತ್ತಿದ್ದಾರೆ.

ಮಾರ್ಚ್ 18ರಂದು ಜರ್ಮನ್ ವ್ಯಕ್ತಿ ಹನೊಯಿಯಿಂದ ದೆಹಲಿ ಮೂಲಕ ಇಸ್ತಾನ್ ಬುಲ್ ಗೆ ತೆರಳಬೇಕಿತ್ತು. ಆದರೆ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಿದ ಪರಿಣಾಮ ಅವರು ದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್ ಮೂರರಲ್ಲಿಯೇ ಜೀವನ ಕಳೆಯುವುಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ 18ರಿಂದಲೇ ಟರ್ಕಿಯಿಂದ ಬರುವ ಮತ್ತು ಹೋಗುವ ವಿಮಾನ ನಿಲ್ದಾಣಗಳನ್ನು ನಿಷೇಧಿಸಲಾಗಿತ್ತು. ಅಲ್ಲದೆ ಜರ್ಮನಿಯಲ್ಲಿ ಆತನ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇರುವುದರಿಂದ ಆತ ತನ್ನ ದೇಶಕ್ಕೆ ಹೋಗಲು ಬಯಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಮಾರ್ಚ್ 19 ರಿಂದ ಈ ವ್ಯಕ್ತಿಗೆ ವಿಮಾನ ನಿಲ್ದಾಣದ ಅಧಿಕಾರಿಗಳೇ ಆಹಾರ ಮತ್ತು ಅಗತ್ಯ ವಸ್ತುಗಳನ್ನು ಒದಗಿಸುತ್ತಿದ್ದು, ಈ ಕುರಿತು ಜರ್ಮನಿ ರಾಯಭಾರ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶದಲ್ಲಿ ಮಾರ್ಚ್ 25ರಿಂದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಮಾರ್ಚ್ 18ರಂದೇ ಟರ್ಕಿ, ಚೀನಾ ಸೇರಿದಂತೆ ಕೆಲವು ದೇಶಗಳ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT