ಸಾಂದರ್ಭಿಕ ಚಿತ್ರ 
ದೇಶ

ರೈಲು ಪ್ರಯಾಣಿಕರಿಗೆ ಮೂರು ನಿಯಮ ರೂಪಿಸಿದ ಕೇಂದ್ರ ಗೃಹ ಸಚಿವಾಲಯ

ಕೇಂದ್ರ ಗೃಹ ಸಚಿವಾಲಯ ರೈಲುಗಳ ಸೋಮವಾರ ಮೂರು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,ಕೊವಿಡ್-19 ಲಕ್ಷಣ ರಹಿತ ಮತ್ತು ಸೀಟ್ ಖಚಿತವಾದ ಟಿಕೆಟ್ ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ. 

ನವದೆಹಲಿ: ಕೇಂದ್ರ ಗೃಹ ಸಚಿವಾಲಯ ರೈಲುಗಳ ಸೋಮವಾರ ಮೂರು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು,ಕೊವಿಡ್-19 ಲಕ್ಷಣ ರಹಿತ ಮತ್ತು ಸೀಟ್ ಖಚಿತವಾದ ಟಿಕೆಟ್ ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದೆ. 

ಎಲ್ಲಾ ಪ್ರಯಾಣಿಕರು ಫೇಸ್ ಮಾಸ್ಕ್ ಧರಿಸಬೇಕು ಮತ್ತು ನಿಲ್ದಾಣಕ್ಕೆ ಪ್ರವೇಶಿಸುವಾಗ ಮತ್ತು ಪ್ರಯಾಣದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಹೇಳಿದ್ದಾರೆ.

1. ಕನ್ಫರ್ಮ್ ಆದ ಇ-ಟಿಕೆಟ್ ಹೊಂದಿದ ಪ್ರಯಾಣಿಕರಿಗೆ ಮಾತ್ರ ರೈಲು ನಿಲ್ದಾಣ ಪ್ರವೇಶಿಸಲು ಅವಕಾಶ ನೀಡಲಾಗುವುದು. 

2. ರೈಲ್ವೆ ಸಿಬ್ಬಂದಿ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಲಕ್ಷ ರಹಿತ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣ ಪ್ರವೇಶಕ್ಕೆ ಅಥವಾ ಪ್ರಯಾಣಕ್ಕೆ ಅವಕಾಶ ನೀಡಬೇಕು. 

3. ಎಲ್ಲಾ ಪ್ರಯಾಣಿಕರಿಗೂ ರೈಲ್ವೆ ನಿಲ್ದಾಣ ಮತ್ತು ರೈಲು ಬೋಗಿಗಳಲ್ಲಿ ಕಡ್ಡಾಯವಾಗಿ ಹ್ಯಾಂಡ್ ಸಾನಿಟೈಸರ್ ನೀಡಬೇಕು ಎಂದು ಗೃಹ ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಮಾರ್ಚ್ 25 ರಂದು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ನಂತರ ಪ್ರಯಾಣಿಕರ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ನಾಳೆಯಿಂದ 15 ರೈಲುಗಳ ಸಂಚಾರ ಆರಂಭವಾಗಲಿದೆ. ಮಂಗಳವಾರದ ಪ್ರಯಾಣಕ್ಕೆ ಇಂದಿನಿಂದಲೇ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT