ದೇಶ

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಉದ್ಧವ್ ಠಾಕ್ರೆ ನಾಮಪತ್ರ ಸಲ್ಲಿಕೆ

Shilpa D

ಮುಂಬೈ: ಮೇ 21 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. 

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಅವಿರೋಧವಾಗಿ ಮಹಾರಾಷ್ಟ್ರ ವಿಧಾನ ಪರಿಷತ್ ಗೆ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಮೈತ್ರಿಯಿಂದ ಸರ್ಕಾರ ರಚನೆಯಾಗಿದ್ದು, ಶಿವಸೇನಾ ಮುಖ್ಯಸ್ಥ ಉದ್ದವ್‌ ಠಾಕ್ರೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅಧಿಕಾರ ಸ್ವೀಕರಿಸಿದ ಆರು ತಿಂಗಳ ಒಳಗೆ ಅವರು ಶಾಸಕರಾಗಲೇಬೇಕಿರುವ ಅನಿವಾರ್ಯತೆ ಇತ್ತು. ಆ ಕಾರಣ ಮೇ 21 ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
 

SCROLL FOR NEXT