ಸಾಂದರ್ಭಿಕ ಚಿತ್ರ 
ದೇಶ

ಎನ್‌ಎಲ್‌ಸಿ ಇಂಡಿಯಾ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ, 2 ಕಾರ್ಮಿಕರು ಸಾವು

ಕಳೆದ ವಾರ ಎನ್‌ಎಲ್‌ಸಿ ಇಂಡಿಯಾದ ಥರ್ಮಲ್ ಪ್ಲಾಂಟ್‌ನಲ್ಲಿ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಎಂಟು ಕಾರ್ಮಿಕರ ಪೈಕಿ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ನವದೆಹಲಿ: ಕಳೆದ ವಾರ ಎನ್‌ಎಲ್‌ಸಿ ಇಂಡಿಯಾದ ಥರ್ಮಲ್ ಪ್ಲಾಂಟ್‌ನಲ್ಲಿ ಸಂಭವಿಸಿದ್ದ ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಎಂಟು ಕಾರ್ಮಿಕರ ಪೈಕಿ ಇಬ್ಬರು ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಉಳಿದ ಆರು ಗಾಯಾಳುಗಳ ಪೈಕಿ ಒಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಮೃತರು ಖಾಯಂ ಉದ್ಯೋಗಿ ಅಥವಾ ಗುತ್ತಿಗೆ ನೌಕರರೆ ಆಗಿರಲಿ ಅವರ ಕುಟುಂಬಕ್ಕೆ ಕನಿಷ್ಠ 15 ಲಕ್ಷ ರೂ.ಪರಿಹಾರ ನೀಡುವಂತೆ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಅವರು ಆದೇಶಿಸಿದ್ದಾರೆ.

ಪರಿಹಾರದ ಜೊತೆಗೆ, ಕಂಪನಿಯು ಮೃತರ ರಕ್ತಸಂಬಂಧಿಗಳಿಗೆ ಖಾಯಂ ಉದ್ಯೋಗವನ್ನು ನೀಡುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ವಾರ, ತಮಿಳುನಾಡಿನ ನೇವೆಲಿಯಲ್ಲಿರುವ ಕಂಪನಿಯ ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ಘಟನೆಯಲ್ಲಿ ಇಬ್ಬರು ಸಾಮಾನ್ಯ ನೌಕರರು ಮತ್ತು ಆರು ಗುತ್ತಿಗೆ ಕಾರ್ಮಿಕರು ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT