ಸಜ್ಜನ್ ಕುಮಾರ್ 
ದೇಶ

1984ರ ಸಿಖ್ ವಿರೋಧಿ ದಂಗೆ: ಸಜ್ಜನ್ ಕುಮಾರ್ ಗೆ ತಕ್ಷಣಕ್ಕೆ ಇಲ್ಲ ಮುಕ್ತಿ, ಜುಲೈಗೆ ವಿಚಾರಣೆ ಮುಂದೂಡಿಕೆ

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಗೆ ತಕ್ಷಣಕ್ಕೆ ಮುಕ್ತಿ ನೀಡದ ಸುಪ್ರೀಂ ಕೋರ್ಟ್ ಜುಲೈ ಗೆ ವಿಚಾರಣೆಯನ್ನು ಮುಂದೂಡಿದೆ.

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಗೆ ತಕ್ಷಣಕ್ಕೆ ಮುಕ್ತಿ ನೀಡದ ಸುಪ್ರೀಂ ಕೋರ್ಟ್ ಜುಲೈ ಗೆ ವಿಚಾರಣೆಯನ್ನು ಮುಂದೂಡಿದೆ.

ಅಲ್ಲದೆ ಸಜ್ಜನ್ ಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈಗೆ ನಿಗದಿಪಡಿಸಿದೆ. 1984ರ ನವೆಂಬರ್ 1 ಮತ್ತು 2ರಂದು ನೈರುತ್ಯ ದೆಹಲಿಯ ಕಂಟೋನ್ಮೆಂಟ್ ಪ್ರದೇಶದ ರಾಜ್ ನಗರ ಭಾಗ-1 ಪ್ರದೇಶದಲ್ಲಿ ಐವರು ಸಿಖ್ಖರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಜ್ಜನ್ ಕುಮಾರ್ ಅಪರಾಧಿ ಎಂದು ಜೀವಾವಧಿ ಶಿಕ್ಷೆ ವಿಧಿಸುವಂತೆ ದೆಹಲಿ ಹೈಕೋರ್ಟ್  ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯಾದ ಬಳಿಕ ದೆಹಲಿಯಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಸಿಖ್ ವಿರೋಧಿ ದಂಗೆ ಎದ್ದಿತ್ತು. ಇಂದಿರಾ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರೇ ಹತ್ಯೆಗೈದಿದ್ದರು.

ದೆಹಲಿ ಹೈಕೋರ್ಟ್ ಕಳೆದ ವರ್ಷ ಅಪರಾಧಿ ಎಂದು ತೀರ್ಪು ನೀಡಿದ ನಂತರ ಸಜ್ಜನ್ ಕುಮಾರ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!