ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಲಾಕ್ ಡೌನ್ ನಿಂದಾಗಿ 300 ಕಿ.ಮೀ ನಡೆದು ಸುಸ್ತಾಗಿದ್ದ ವಲಸೆ ಕಾರ್ಮಿಕ ಬಿಸಿಲಿನ ತಾಪದಿಂದ ಸಾವು

ಕೊವಿಡ್-19 ಲಾಕ್ ಡೌನ್ ಪರಿಣಾಮ 21 ವರ್ಷದ ವಲಸೆ ಕಾರ್ಮಿಕನೊಬ್ಬ ಒಡಿಶಾವನ್ನು ತಲುಪಲು ಮೂವರು ಸ್ನೇಹಿತರೊಂದಿಗೆ ಹೈದರಾಬಾದ್ ನಿಂದ 300 ಕಿ.ಮೀ ನಡೆದು, ಭದ್ರಾಚಲಂನಲ್ಲಿ ನಡೆದ ಬಿಸಿಲಿನ ತಾಪದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಹೈದರಾಬಾದ್: ಕೊವಿಡ್-19 ಲಾಕ್ ಡೌನ್ ಪರಿಣಾಮ 21 ವರ್ಷದ ವಲಸೆ ಕಾರ್ಮಿಕನೊಬ್ಬ ಒಡಿಶಾವನ್ನು ತಲುಪಲು ಮೂವರು ಸ್ನೇಹಿತರೊಂದಿಗೆ ಹೈದರಾಬಾದ್ ನಿಂದ 300 ಕಿ.ಮೀ ನಡೆದು, ಭದ್ರಾಚಲಂನಲ್ಲಿ ನಡೆದ ಬಿಸಿಲಿನ ತಾಪದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಭಾನುವಾರ ಹೈದರಾಬಾದ್ ನಿಂದ ಹೊರಟ ಈ ಕಾರ್ಮಿಕರು, ಒಡಿಶಾದ ಮಲ್ಕನಗಿರಿ ತಲುಪಬೇಕಿತ್ತು. ಆದರೆ ಮಂಗಳವಾರ ಭದ್ರಾಚಲಂ ತಲುಪುತ್ತಿದ್ದಂತೆ ಓರ್ವ ಕಾರ್ಮಿಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ವಾಂತಿಯಾಗಿ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾನೆ. ಆತನ ಸ್ನೇಹಿತರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ದಾರಿ ಮಧ್ಯೆಯೇ ಕಾರ್ಮಿಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಸಿಲಿನ ಹೊಡೆತದಿಂದ ಕಾರ್ಮಿಕ ಮೃತಪಟ್ಟಿರಬಹುದು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. 

ಮೃತ ಕಾರ್ಮಿಕ ಕಳೆದ ಸೋಮವಾರದಿಂದ ಊಟ ಮಾಡಿರಲಿಲ್ಲ ಎಂದು ಆತನ ಸ್ನೇಹಿತರು ಹೇಳಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಮೃತ ಕಾರ್ಮಿಕನ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಮೃತ ದೇಹವನ್ನು ಮಲ್ಕನಗಿರಿಗೆ ಕೊಂಡೊಯ್ಯಲು ವಾಹನ ವ್ಯವಸ್ಥೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT