ದೇಶ

ಔಷಧಗಳಿಗೆ ಅಗತ್ಯವಿರುವ ರಾಸಾಯನಿಕ ಮುಂದಿನ ದಿನಗಳಲ್ಲಿ ಭಾರತದಲ್ಲೇ ತಯಾರಿ: ಸದಾನಂದ ಗೌಡ

Srinivas Rao BV

ನವದೆಹಲಿ: ಭಾರತ ಸ್ವಾವಲಂಬಿ ರಾಷ್ಟ್ರವಾಗುವತ್ತ ದಾಪುಗಾಲಿರಿಸಿದ್ದು ಔಷಧಗಳ ತಯಾರಿಕೆಗೆ ಅಗತ್ಯವಿರುವ ರಾಸಾಯನಿಕಗಳಿಗೆ ಚೀನಾ ದೇಶದ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿ ಉತ್ಪಾದಿಸುವ ಕುರಿತಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ

ಕೊರೊನಾ ವೈರಾಣು ಸೋಂಕಿನಿಂದ ಇಡೀ ವಿಶ್ವವೇ ಬಿಕ್ಕಟ್ಟಿನ ಸಂದರ್ಭ ಎದುರಿಸುತ್ತಿರುವ ಸಂದರ್ಭದಲ್ಲಿ ಸವಾಲನ್ನು ಅವಕಾಶವಾಗಿ ಪರಿವರ್ತಿಸಿ ಇದರ ವಿರುದ್ಧ ಹೋರಾಡಿ ಜಯ ಸಾಧಿಸಲು ಕೇಂದ್ರ ಸರ್ಕಾರ ಸ್ವಾವಲಂಬಿ ಭಾರತ್ ಯೋಜನೆ ಜಾರಿಗೆ ತಂದಿದೆ ಎಂದು ಅವರು ಹೇಳಿದ್ದಾರೆ.

SCROLL FOR NEXT