ಜ.ಬಿಪಿನ್ ರಾವತ್ 
ದೇಶ

ಅಲ್ಪ ಸೇವಾ ಆಯೋಗವನ್ನು ಹೆಚ್ಚು ಆಕರ್ಷಕವಾಗಿ ಮಾಡುವತ್ತ ಸೇನೆಯ ಚಿತ್ತ: ಜನರಲ್ ಬಿಪಿನ್ ರಾವತ್

ಭಾರತ ಸೇನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಿಂತ ಕೆಳಗಿರುವ ಸಿಬ್ಬಂದಿ(ಪಿಬಿಒಆರ್) ಹಂತದಲ್ಲಿ ಇರುವ ಕೊರತೆಯನ್ನು ನಿವಾರಿಸುವತ್ತ ಗಮನ ಹರಿಸಿದೆ. ಅಲ್ಲದೆ ರಕ್ಷಣಾ ಬಜೆಟ್ ನ ವೆಚ್ಚವನ್ನು ತಗ್ಗಿಸಲು ಪ್ರಯತ್ನಿಸುತ್ತಿದೆ.

ನವದೆಹಲಿ: ಭಾರತ ಸೇನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಿಂತ ಕೆಳಗಿರುವ ಸಿಬ್ಬಂದಿ(ಪಿಬಿಒಆರ್) ಹಂತದಲ್ಲಿ ಇರುವ ಕೊರತೆಯನ್ನು ನಿವಾರಿಸುವತ್ತ ಗಮನ ಹರಿಸಿದೆ. ಅಲ್ಲದೆ ರಕ್ಷಣಾ ಬಜೆಟ್ ನ ವೆಚ್ಚವನ್ನು ತಗ್ಗಿಸಲು ಪ್ರಯತ್ನಿಸುತ್ತಿದೆ.

ಭಾರತೀಯ ಸೇನೆಯಲ್ಲಿ ಟೂರ್ ಆಫ್ ಡ್ಯೂಟಿ ಪ್ರಾಯೋಗಿಕ ಮಾದರಿಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದ್ದು ಹಳೆಯ ಅಲ್ಪ ಸೇವೆಯ ಆಯೋಗ(ಎಸ್ ಎಸ್ ಸಿ) ಯೋಜನೆಯನ್ನು ಇನ್ನಷ್ಟು ಆಕರ್ಷಕವಾಗಿ ರೂಪಿಸಲು ಮುಂದಾಗಿದೆ.

ಈ ಬಗ್ಗೆ ನಿನ್ನೆ ಮಾಹಿತಿ ನೀಡಿದ ಭಾರತ ರಕ್ಷಣಾ ಸಿಬ್ಬಂದಿ ಪಡೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅಲ್ಪ ಸೇವಾ ಆಯೋಗವನ್ನು ಇನ್ನಷ್ಟು ಆಕರ್ಷಕಗೊಳಿಸುವತ್ತ ನಾವು ಗಮನ ಹರಿಸುತ್ತಿದ್ದೇವೆ ಎಂದರು.

ಮುಂಬರುವ ಸಮಯದಲ್ಲಿ, ಎಸ್‌ಎಸ್‌ಸಿ ಸೈನ್ಯವನ್ನು ತೊರೆಯುವ ಅಧಿಕಾರಿಗಳನ್ನು ಇತರ ಸಿವಿಲ್ ಉದ್ಯೋಗಗಳಿಗೆ ವೃತ್ತಿಪರವಾಗಿ ಶಸ್ತ್ರಸಜ್ಜಿತವಾಗಿಸಲು ಮಾರ್ಗೋಪಾಯಗಳ ಜೊತೆಗೆ ಆರ್ಥಿಕವಾಗಿ ಸದೃಢಗೊಳಿಸಲು ಕೂಡ ನೋಡಬಹುದು ಎಂದು ಜನರಲ್ ರಾವತ್ ಹೇಳಿದ್ದಾರೆ.

ಟೂರ್ ಆಫ್ ಡ್ಯೂಟಿ ಬಗ್ಗೆ ಮಾತನಾಡಿದ ಅವರು, ಇದು ಮಾತುಕತೆ ಹಂತದಲ್ಲಿದ್ದು ಭವಿಷ್ಯದಲ್ಲಿ ಇದಕ್ಕೆ ಸಂಬಂಧಪಟ್ಟಂತೆ ಯುವಕರಿಗೆ ನೀಡುವ ತರಬೇತಿ ಮತ್ತು ಸಜ್ಜುಗೊಳಿಸುವಿಕೆಯ ವೆಚ್ಚದ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಟೂರ್ ಆಫ್ ಡ್ಯೂಟಿ ಪ್ರಸ್ತುತ ಸೇನೆಗೆ ಮಾತ್ರ ಸೀಮಿತವಾಗಿದ್ದು ಭಾರತದ ಸದೃಢ ಯುವ ಕಾರ್ಯಕರ್ತರನ್ನು ಸೇನೆಗೆ ಸೇರುವಂತೆ ಆಕರ್ಷಿಸಲು, ಯುದ್ಧ ವಿಭಾಗಕ್ಕೆ ಯುವಜನತೆಯನ್ನು ಸೆಳೆಯಲು ಇದನ್ನು ತರಲಾಗುತ್ತಿದೆ.  ಮೂರು ವರ್ಷಗಳ ಅವಧಿಗೆ ಅಧಿಕಾರಿ ಮತ್ತು ಜವಾನ ಎರಡೂ ಹುದ್ದೆಗಳಲ್ಲಿ ಯುವಜನತೆಯನ್ನು ನೇಮಕಾತಿ ಮಾಡಿಕೊಳ್ಳುವುದು ಟೂರ್ ಆಫ್ ಡ್ಯೂಟಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT