ಸಾಂದರ್ಭಿಕ ಚಿತ್ರ 
ದೇಶ

ನೈರುತ್ಯ ಮುಂಗಾರು ಜೂನ್ 5ಕ್ಕೆ ಕೇರಳ ಪ್ರವೇಶ ಸಾಧ್ಯತೆ

ಈ ವರ್ಷ ನೈರುತ್ಯ ಮುಂಗಾರು ಮಳೆ ಆಗಮನ ಕೊಂಚ ತಡವಾಗಲಿದೆ. ಸಾಮಾನ್ಯವಾಗಿ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತದೆ.

ತಿರುವನಂತಪುರ: ಈ ವರ್ಷ ನೈರುತ್ಯ ಮುಂಗಾರು ಮಳೆ ಆಗಮನ ಕೊಂಚ ತಡವಾಗಲಿದೆ. ಸಾಮಾನ್ಯವಾಗಿ ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ನಂತರ ರಾಜ್ಯಕ್ಕೆ ಆಗಮಿಸುತ್ತದೆ.

ಆದರೆ ಈ ವರ್ಷ ಕೇರಳಕ್ಕೆ ಜೂನ್ 5ಕ್ಕೆ ಮುಂಗಾರು ಪ್ರವೇಶವಾಗಲಿದೆ. ಅಂದರೆ ನಮ್ಮ ರಾಜ್ಯಕ್ಕೆ ಜೂನ್ 5ರ ನಂತರ 9ರ ಮಧ್ಯೆ ಯಾವ ದಿನವಾದರೂ ಪ್ರವೇಶವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆರಂಭದಲ್ಲಿ ಮುಂಗಾರು ಮಳೆ ದಕ್ಷಿಣ ಅಂಡಮಾನ್ ಸಮುದ್ರದತ್ತ ಬೀಸಿ ನಂತರ ಉತ್ತರಾಭಿಮುಖವಾಗಿ ಪಶ್ಚಿಮ ಭಾಗಕ್ಕೆ ಬಂಗಾಳ ಕೊಲ್ಲಿ ಮೂಲಕ ವಿಸ್ತಾರಗೊಳ್ಳಲಿದೆ. ಅಂಡಮಾನ್ ಸಮುದ್ರ ತೀರದಲ್ಲಿ ಸಾಮಾನ್ಯವಾಗಿ ಮೇ 22ರ ಹೊತ್ತಿಗೆ ನೈರುತ್ಯ ಮುಂಗಾರು ಪ್ರವೇಶವಾಗುತ್ತದೆ. ಪ್ರಸ್ತುತ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿದೆ.

ದಕ್ಷಿಣ ಬಂಗಾಳ ಕೊಲ್ಲಿಯ ಕೇಂದ್ರ ಭಾಗದಲ್ಲಿ ನಾಳೆ ಚಂಡಮಾರುತ ಏಳುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಅಂಡಮಾನ್ ಗೆ ತಲುಪಿದ 10 ದಿನಗಳ ನಂತರ ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ನೈರುತ್ಯ ಮುಂಗಾರು ಈ ತಿಂಗಳ 28ರಂದು ಕೇರಳಕ್ಕೆ ಪ್ರವೇಶವಾಗಲಿದೆ. ಮತ್ತೊಂದು ಹವಾಮಾನ ಸಂಸ್ಥೆ ವೆದರ್ ಚಾನೆಲ್ ಪ್ರಕಾರ ಮೇ 31ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT