ಮಾಯಾವತಿ 
ದೇಶ

ವಲಸೆ ಕಾರ್ಮಿಕರ ಬಗ್ಗೆ ಜವಾಬ್ದಾರಿಯಿಂದ ವರ್ತಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಎಂಗೆ ಮಾಯಾವತಿ ಆಗ್ರಹ

ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ನಸುಕಿನ ಜಾವ ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಿಎಸ್ ಪಿ ನಾಯಕಿ ಮಾಯಾವತಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಲಕ್ನೊ: ಉತ್ತರ ಪ್ರದೇಶದ ಔರೈಯಾ ಬಳಿ ಶನಿವಾರ ನಸುಕಿನ ಜಾವ ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿ 24 ಮಂದಿ ವಲಸೆ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಬಿಎಸ್ ಪಿ ನಾಯಕಿ ಮಾಯಾವತಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಹಣಕಾಸು ನೆರವು ನೀಡಬೇಕೆಂದು ಸಹ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶಕ್ಕೆ ಬರುವ ಮತ್ತು ಈ ರಾಜ್ಯದ ಮೂಲಕ ಹಾದುಹೋಗುವ ವಲಸೆ ಕಾರ್ಮಿಕರಿಗೆ ಆಹಾರ, ಸಾರಿಗೆ ಮತ್ತು ಆಶ್ರಯ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿಗಳು ಆದೇಶ ನೀಡಿದ್ದರು. ಆದರೆ ಇಲ್ಲಿ ಮುಖ್ಯಮಂತ್ರಿಗಳ ಆದೇಶವನ್ನು ಅಧಿಕಾರಿಗಳು ಜವಾಬ್ದಾರಿಯಿಂದ ಪಾಲಿಸಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಇಲ್ಲಿ ಹೊಣೆಯಾಗಿಸಬೇಕು ಎಂದು ಮಾಯಾವತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ