ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್ ಎಫೆಕ್ಟ್: ರಾಷ್ಟ್ರೀಯ ಜನಸಂಖ್ಯಾ ನೋಂದಣಿ 2021ರ ಕಾರ್ಯ ಸ್ಥಗಿತಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ದೇಶದಲ್ಲಿ ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) 2021’ ಕೆಲಸ ಕಾರ್ಯಗಳನ್ನು ಮುಂದೂಡಿದೆ.

ಲಖನೌ: ದೇಶದಲ್ಲಿ ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ‘ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) 2021’ ಕೆಲಸ ಕಾರ್ಯಗಳನ್ನು ಮುಂದೂಡಿದೆ.

2021ರ ಮೊದಲ ಹಂತದ ಜನಗಣತಿ ಮತ್ತು ಎನ್‌ಪಿಆರ್‌ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಉತ್ತರ ಪ್ರದೇಶ ಗೃಹ ಸಚಿವಾಲಯ ತಿಳಿಸಿದೆ. ಈ ಹಿಂದೆಯೂ ಕೂಡ ಕೋವಿಡ್–19 ಹಿನ್ನೆಲೆಯಲ್ಲಿ ಎನ್‌ಪಿಆರ್‌ ಪರಿಷ್ಕರಣೆಯನ್ನು ಮಾರ್ಚ್‌ 25ರಂದೇ ಕೇಂದ್ರ  ಸರ್ಕಾರ ಮುಂದೂಡಿತ್ತು. ಇದೇ ಸಂದರ್ಭದಲ್ಲೇ ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್‌ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸಿದ್ದವು.

ಇನ್ನು ಬಿಜೆಪಿಯೇತರ ಸರ್ಕಾರವಿರುವು ರಾಜ್ಯಗಳೂ ಕೂಡ ಕೇಂದ್ರದ ಎನ್ ಪಿಆರ್ ಗೆ ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೆ ಎನ್ ಪಿಆರ್ ವಿರುದ್ಧ ನಿರ್ಣಯ ತಂದು ತಡೆಯೊಡ್ಡಿದ್ದವು. ಪ್ರಮುಖವಾಗಿ ಆಂಧ್ರ ಪ್ರದೇಶ, ದೆಹಲಿ, ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ  ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದವು. ಬಳಿಕ ರಾಜಸ್ಥಾನ, ಪಂಜಾಬ್, ಕೇರಳ, ಪಶ್ಚಿಮ ಬಂಗಾಳ, ತೆಲಂಗಾಣ, ಛತ್ತೀಸ್ ಘಡ ಸರ್ಕಾರಗಳು ಎನ್ ಪಿಆರ್ ವಿರುದ್ಧ ನಿರ್ಣಯ ಮಂಡಿಸಿದ್ದವು. 

ಇನ್ನು ಕೇಂದ್ರ ಸರ್ಕಾರ ಸಿಎಎ ಬೆನ್ನಲ್ಲೇ ಎನ್ ಪಿಆರ್ ಘೋಷಣೆ ಮಾಡಿ ಇದಕ್ಕಾಗಿ  3941 ಹಣ ಮೀಸಲಿಟ್ಟಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT