ಅಂಫಾನ್ ಚಂಡಮಾರುತ 
ದೇಶ

ಅಪಾಯಕಾರಿ ಮಟ್ಟದಲ್ಲಿ ಅಂಫಾನ್ ಚಂಡಮಾರುತ: ಬಂಗಾಳ, ಒಡಿಶಾದಲ್ಲಿ ತೀವ್ರ ಕಟ್ಟೆಚ್ಚರ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತ ಅಪಾಯಕಾರಿ ಮಟ್ಟ ತಲುಪಿದ್ದು, ಸಂಜೆ ವೇಳೆಗೆ ತನ್ನ ವೇಗವನ್ನು ಹೆಚ್ಚಿಸಿಕೊಂಡು ಸೂಪರ್ ಸೈಕ್ಲೋನ್ ಆಗಿ ಮಾರ್ಪಾಡಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಂಫಾನ್ ಚಂಡಮಾರುತ ಅಪಾಯಕಾರಿ ಮಟ್ಟ ತಲುಪಿದ್ದು, ಸಂಜೆ ವೇಳೆಗೆ ತನ್ನ ವೇಗವನ್ನು ಹೆಚ್ಚಿಸಿಕೊಂಡು ಸೂಪರ್ ಸೈಕ್ಲೋನ್ ಆಗಿ ಮಾರ್ಪಾಡಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉದ್ಭವಿಸಿರುವ ಅಂಫಾನ್ ಚಂಡಮಾರುತ ತೀವ್ರ ಗತಿ ಪಡೆದುಕೊಂಡಿದ್ದು, ಕಳೆದ ಕೆಲ ಗಂಟೆಗಳಲ್ಲಿ ಈಶಾನ್ಯ ದಿಕ್ಕಿನತ್ತ 13 ಕಿಮೀ ವೇಗದಲ್ಲಿ ದಾಂಗುಡಿ ಇಡುತ್ತಿದೆ. ಇಂದು ಸಂಜೆ ಹೊತ್ತಿಗೆ ಚಂಡಮಾರುತ ತನ್ನ ವೇಗವನ್ನು ಹೆಚ್ಚಿಸಿಕೊಂಡು ಸೂಪರ್ ಸೈಕ್ಲೋನ್ ಆಗಿ  ಮಾರ್ಪಡಲಿದ್ದು, ಚಂಡಮಾರುತ ಬುಧವಾರದೊಳಗೆ ಇನ್ನಷ್ಟು ವೇಗ ಮತ್ತು ಅಬ್ಬರ ಪಡೆದುಕೊಂಡು ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕರಾವಳಿ ಪ್ರದೇಶಗಳ ಮೇಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬಂಗಾಳ, ಒಡಿಶಾದಲ್ಲಿ ತೀವ್ರ ಕಟ್ಟೆಚ್ಚರ
ಬುಧವಾರದ ಹೊತ್ತಿಗೆ ಚಂಡಮಾರುತ ತೀವ್ರ ಮಟ್ಟದಲ್ಲಿ ಅಪ್ಪಳಿಸುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಫನಿ ಚಂಡಮಾರುತದಿಂದ ತತ್ತರಿಸಿಹೋಗಿದ್ದ ಒಡಿಶಾದಲ್ಲಿ ಇದೀಗ ಅಂಫಾನ್ ಚಂಡಮಾರುತದಿಂದಾಗಿ ಮತ್ತೆ  ಬಿಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎನ್​ಡಿಆರ್​ಎಫ್​ನ 17 ತಂಡಗಳು ಮೊಕ್ಕಾಂ ಹೂಡಿದ್ದು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾ ಮಾತ್ರವಲ್ಲದೇ ನೆರೆ ಬಾಂಗ್ಲಾದೇಶಕ್ಕೂ ಚಂಡಮಾರುತದ ಅಪಾಯಗಳಿದ್ದು, ಅಲ್ಲಿಯೂ ಭಾರಿ  ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

180 ಕಿಲೋಮೀಟರ್ ವೇಗದಲ್ಲಿ ಚಂಡಮಾರುತ: ಭಾರೀ ಬಿರುಗಾಳಿ ಮಳೆ ಸಾಧ್ಯತೆ
ಅಂಫಾನ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮೇ 20, 21 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ  ದಳ 17 ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ಪಶ್ಚಿಮಬಂಗಾಳ ಮತ್ತು ಒಡಿಶಾ ರಾಜ್ಯಗಳಿಗೆ ಕಳುಹಿಸಿದೆ. ಮೇ 20 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಗೆ ಅಂಫಾನ್ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 180 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.  ಎರಡೂ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮೇ 21 ರವರೆಗೆ ಮಳೆ ಮುಂದುವರಿಯಲಿದೆ. ಮೇ 18 ರಂದು ಅಂದರೆ ಇಂದಿನಿಂದಲೇ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗಲಿದೆ ಎನ್ನಲಾಗಿದ್ದು, ಗೃಹ ಇಲಾಖೆ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT