ಜಿತೇಂದ್ರ ಅವಾದ್ 
ದೇಶ

ಅತಿಯಾದ ಆತ್ಮವಿಶ್ವಾಸವೇ ನನಗೆ ಕೊರೋನಾ ಬರಲು ಕಾರಣವಾಯಿತು: ಮಹಾ ಸಚಿವ ಜಿತೇಂದ್ರ

"ಅತಿಯಾದ ಆತ್ಮವಿಶ್ವಾಸ" ದಿಂದಾಗಿ ತಾವು ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿರುವುದಾಗಿ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ಹಿರಿಯ ಮುಖಂಡ ಜಿತೇಂದ್ರ ಅವಾದ್ ಅವರು ಸೋಮವಾರ ಹೇಳಿದ್ದಾರೆ.

ಮುಂಬೈ: "ಅತಿಯಾದ ಆತ್ಮವಿಶ್ವಾಸ" ದಿಂದಾಗಿ ತಾವು ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿರುವುದಾಗಿ ಮಹಾರಾಷ್ಟ್ರ ಸಚಿವ ಮತ್ತು ಎನ್‌ಸಿಪಿ ಹಿರಿಯ ಮುಖಂಡ ಜಿತೇಂದ್ರ ಅವಾದ್ ಅವರು ಸೋಮವಾರ ಹೇಳಿದ್ದಾರೆ.

ಮುಂಬ್ರಾ-ಕೌಸಾದ ಶಾಸಕ ಅವಾದ್ ಅವರು ತಮ್ಮ ಕೆಲವು ಭದ್ರತಾ ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟ ನಂತರ , ಏಪ್ರಿಲ್ 13 ರಂದು ಮುನ್ನೆಚ್ಚರಿಕೆ ಕ್ರಮವಾಗಿ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಬಳಿಕ ಏಪ್ರಿಲ್ 19 ರಂದು ಸ್ವತಃ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿತ್ತು.

ಅತಿಯಾದ ವಿಶ್ವಾಸವೇ ನನಗೆ ಕೊರೋನಾ ಬರಲು ಕಾರಣವಾಯಿತು. ಏಪ್ರಿಲ್ 23 ಮತ್ತು 26 ರ ನಡುವಿನ ಅವಧಿ ನನ್ನ ಜೀವನದಲ್ಲಿ ಅತ್ಯಂತ ನಿರ್ಣಾಯಕವಾಗಿತ್ತು. ನಾನು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ನನ್ನ ಕುಟುಂಬಕ್ಕೆ ತಿಳಿಸಲಾಯಿತು. ನನ್ನ ಜೀವನಕ್ಕಾಗಿ ನಾನು ತುಂಬಾ ಹೆದರುತ್ತಿದ್ದೆ. ನಾನು ಪ್ರತಿ ನಿಮಿಷವೂ ಜೀವನ ಮತ್ತು ಸಾವಿನ ಬಗ್ಗೆ ಯೋಚಿಸುತ್ತಿದ್ದೇನೆ "ಎಂದು ಅವರು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಐಸಿಯುನಲ್ಲಿದ್ದಾಗ ನಾನು ಒಂದು ಟಿಪ್ಪಣಿಯನ್ನು ಸಹ ಬರೆದಿದ್ದೇನೆ, ನನಗೆ ಏನಾದರೂ ಆದರೆ ನನ್ನ ಎಲ್ಲಾ ಆಸ್ತಿಯನ್ನು ನನ್ನ ಮಗಳಿಗೆ ನೀಡಬೇಕೆಂದು ಹೇಳಿದ್ದೇನೆ ಎಂದಿದ್ದಾರೆ.

"ನನ್ನ ಆರೋಗ್ಯ ಮತ್ತು ಜೀವನಶೈಲಿಯ ಬಗ್ಗೆ ನಾನು ಹೆಚ್ಚು ಅಜಾಗರೂಕನಾಗಿರುತ್ತೇನೆ ಎಂಬುದನ್ನು ಈ ರೋಗವು ನನಗೆ ಮನದಟ್ಟು ಮಾಡಿಕೊಟ್ಟಿತು. ರಾಜಕೀಯದ ಹೊರಗೆ ಜೀವನವಿದೆ ಎಂದು ನಾನು ಸಂಪೂರ್ಣವಾಗಿ ಮರೆತಿದ್ದೇನೆ. ಈಗ, ನನ್ನ ಜೀವನವು ಹೆಚ್ಚು ಶಿಸ್ತುಬದ್ಧವಾಗಿರಬೇಕು ಎಂದು ನಾನು ಅರಿತುಕೊಂಡಿದ್ದೇನೆ" ಎಂದು ಅವರು ಹೇಳಿದ್ದಾರೆ.

ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವಾದ್ ಅವರು ಕೊವಿಡ್-19 ರಿಂದ ಸಂಪೂರ್ಣ ಗುಣಮುಖರಾಗಿ ಮೇ 10 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?