ಸಾಂದರ್ಭಿಕ ಚಿತ್ರ 
ದೇಶ

ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಕಡ್ಡಾಯವಾಗಿ ಪಾಲಿಸಬೇಕು: ರಾಜ್ಯಗಳಿಗೆ ಕೇಂದ್ರದ ಕಟ್ಟು ನಿಟ್ಟಿನ ಆದೇಶ 

ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳು ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಮೇ 31ರ ವರೆಗೆ ದೇಶಾದ್ಯಂತ ಲಾಕ್‌ಡೌನ್ 4.0 ಮಾರ್ಗಸೂಚಿಗಳು ಅನ್ವಯವಾಗಲಿವೆ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.

ನವದೆಹಲಿ: ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳು ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ಮು ಯಾವುದೇ ಕಾರಣಕ್ಕೂ ಉಲ್ಲಂಘಿಸಬಾರದು. ಮೇ 31ರ ವರೆಗೆ ದೇಶಾದ್ಯಂತ ಲಾಕ್‌ಡೌನ್ 4.0 ಮಾರ್ಗಸೂಚಿಗಳು ಅನ್ವಯವಾಗಲಿವೆ ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಹೇಳಿದೆ.

ಈ ಸಂಬಂಧ ರಾಜ್ಯ ಸರ್ಕಾರಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ಮೇ 11 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ರಾಜ್ಯಗಳಿಂದ ಪಡೆದ ಅಭಿಪ್ರಾಯ ಆಧರಿಸಿ ಈ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಬಾರದು ಎಂದು ಸೂಚಿಸಲಾಗಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ತಮ್ಮ ರಾಜ್ಯಗಳ ಪರಿಸ್ಥಿತಿಯ ಆಧಾರದ ಮೇಲೆ, ವಿವಿಧ ವಲಯಗಳಲ್ಲಿ ಕೆಲವು ಚಟುವಟಿಕೆಗಳನ್ನು ನಿಷೇಧಿಸಬಹುದು ಅಥವಾ ಅಗತ್ಯವೆಂದು ಪರಿಗಣಿಸುವಂತಹ ನಿರ್ಬಂಧಗಳನ್ನು ವಿಧಿಸಬಹುದು ಎಂದು ಭಲ್ಲಾ ಹೇಳಿದ್ದಾರೆ.

"ಹೊಸ ಮಾರ್ಗಸೂಚಿಗಳ ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ನಿರ್ದೇಶಿಸಬೇಕು ಎಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ" ಎಂದು ಭಲ್ಲಾ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT