ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,970 ಹೊಸ ಪ್ರಕರಣ, 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಕಳೆದ 24 ಗಂಟೆಗಳಲ್ಲಿ 4 ಸಾವಿರದ 970 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೇಶಾದ್ಯಂತ ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ. 

ನವದೆಹಲಿ:ದೇಶದಲ್ಲಿ ಮಾರಕ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 4 ಸಾವಿರದ 970 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೇಶಾದ್ಯಂತ ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ.

ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ. 

ಮೇ.31ರವರೆಗೂ ಕೊರೋನಾವೈರಸ್ ಲಾಕ್ ಡೌನ್ ನ್ನು ಕೇಂದ್ರ ಸರ್ಕಾರ ಭಾನುವಾರ ವಿಸ್ತರಿಸಿದೆ. ಆದರೆ, ಅನೇಕ ವಿನಾಯಿತಿಗಳೊಂದಿಗೆ ಭರವಸೆ ನೀಡಿದಂತಿದೆ. 

ಹೊಸ ಮಾರ್ಗೂಸೂಚಿಯಂತೆ ಸಲೂನ್, ಕ್ಷೌರದಂಗಡಿ, ಶಾಫಿಂಗ್ ಕಾಪ್ಲೆಂಕ್ಸ್ ಮತ್ತು ಮಾರ್ಕೆಟ್ ಗಳನ್ನು ತೆರೆಯಲು ನಿನ್ನೆಯಿಂದ ಅವಕಾಶ ನೀಡಲಾಗಿದೆ. ಆದಾಗ್ಯೂ, ದೇಶಿಯ ವಿಮಾನಗಳು, ಶಾಲಾ- ಕಾಲೇಜುಗಳು, ಹೋಟೆಲ್ ಗಳು ದೇಶಾದ್ಯಂತ ಮುಚ್ಚಲ್ಪಟ್ಟಿರುತ್ತವೆ.

ಕಂಟೈನ್ ಮೆಂಟ್ ವಲಯಗಳನ್ನು ಹೊರತುಪಡಿಸಿ ಸರ್ಕಾರದಿಂದ ವಲಯವಾರು ನಿರ್ಬಂಧವಿಲ್ಲ ಮತ್ತು ಆರೋಗ್ಯ ಸಚಿವಾಲಯದ ಅಂಕಿಸಂಖ್ಯೆಗಳೊಂದಿಗೆ  ಕೆಂಪು, ಹಳದಿ ಮತ್ತು ಹಸಿರು ವಲಯವನ್ನಾಗಿ ರೂಪಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT