ಸಾಂದರ್ಭಿಕ ಚಿತ್ರ 
ದೇಶ

ವಿವಾಹದ ನಂತರ ಪ್ರತ್ಯೇಕತೆಯ ಭಯ: ತಮಿಳುನಾಡಿನ ನಾಮಕ್ಕಲ್ ನಲ್ಲಿ ಇಬ್ಬರು ಮಹಿಳೆಯರ ಆತ್ಮಹತ್ಯೆ

ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ನಲ್ಲಿ ನಡೆದಿದೆ.

ನಾಮಕ್ಕಲ್: ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ನಾಮಕ್ಕಲ್ ನಲ್ಲಿ ನಡೆದಿದೆ.

ಪೆರಿಯಮ್ಮಾಳ್ ನಿವಾಸಿ, ಎನ್ ಜ್ಯೋತಿ, ಮೃತ ದುರ್ದೈವಿ, ಕೌಟುಂಬಿಕ ವಿವಾದದಿಂದಾಗಿ ಕೆಲವು ತಿಂಗಳ ಹಿಂದೆ ತನ್ನ ಗಂಡನಿಂದ ಬೇರ್ಪಟ್ಟ ಮಹಿಳೆ ಮತ್ತು ತನ್ನ ಮೂರು ವರ್ಷದ ಮಗಳೊಂದಿಗೆ ಅಜ್ಜಿಯ ಮನೆಯಲ್ಲಿ ತಂಗಿದ್ದಳು.

ಈಕೆ ತನ್ನ ಗಂಡನಿಂದ ಬೇರ್ಪಟ್ಟ ನಂತರ, ಪೆರಿಯಾ ಮನಾಲಿಯಲ್ಲಿನ ವಿದ್ಯುತ್ ಮಗ್ಗದ ಘಟಕದಲ್ಲಿ ದಿನಗೂಲಿ ಕೆಲಸ ಮಾಡಲು ಪ್ರಾರಂಭಿಸಿದ್ದಳು. ಕೆಲಸ ಮಾಡುವ ಸ್ಥಳದಲ್ಲಿ   ಕೊಟ್ಟ ಪಾಳ್ಯಂ ನ ಪ್ರಿಯಾ ಎಂಬಾಕೆಯ ಜೊತೆ ಸ್ನೇಹ ಬೆಳೆಸಿಕೊಂಡಿದ್ದಳು. ಇಬ್ಬರು ಆತ್ಮೀಯರಾಗಿದ್ದರು.

ಆದರೆ, ಪ್ರಿಯಾಳ ಪೋಷಕರು ಮೇ 27  ಪ್ರಿಯಾಳಿಗೆ ಮದುವೆಯನ್ನು ನಿಗದಿಪಡಿಸಿದ್ದರು. ಇದರಿಂದ ಇಬ್ಬರು ಮಹಿಳೆಯರು ಅಸಮಾಧಾನಗೊಂಡಿದ್ದರು,ಮತ್ತು ಪ್ರಿಯಾ ಮದುವೆಯಾದ ನಂತರ ಭೇಟಿಯಾಗಲು ಸಾಧ್ಯವಾಗುವುದಿಲ್ಲ ಎಂಬ ಭಯದಲ್ಲಿದ್ದರು.ಶನಿವಾರ ಪ್ರಿಯಾ ಜ್ಯೋತಿ ನಿವಾಸಕ್ಕೆ ತೆರಳಿದ್ದಳು, ಸ್ವಲ್ಪ ಸಮಯದ ನಂತರ ಪ್ರಿಯಾ
ಸಹೋದರ ಜ್ಯೋತಿ ಮನೆಗೆ ತೆರಳಿ ಆಕೆಯನ್ನು ಹುಡುಕಾಡಿದ್ದ,  ಜ್ಯೋತಿ ಮನೆಯ ಮುಂದಿನ ಬಾಗಿಲು ಮುಚ್ಚಿತ್ತು.

ಕಿಟಕಿ ಮೂಲಕ ನೋಡಿದಾಗ ಇಬ್ಬರು ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಇಬ್ಬರು ದೈಹಿಕ ಸಂಬಂಧ ಹೊಂದಿದ್ದರು ಎಂದು ಪೊಲೀಸರು ಶಂಕಿಸಿದ್ದಾರೆ., ಈ ಸಂಬಂಧ ಇಲಾಚಿಪಾಲ್ಯಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT