ಬಸ್ಸು-ಟ್ರಕ್ ಡಿಕ್ಕಿ 
ದೇಶ

ಮಹಾರಾಷ್ಟ್ರದಲ್ಲಿ ಬಸ್ಸು-ಟ್ರಕ್ ಢಿಕ್ಕಿ: 4 ವಲಸೆ ಕಾರ್ಮಿಕರು ಸಾವು, 22 ಮಂದಿಗೆ ಗಾಯ

ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ಸು ಮಹಾರಾಷ್ಟ್ರದ ಸೋಲಾಪುರದಿಂದ ಜಾರ್ಖಂಡ್ ಗೆ ಸಂಚರಿಸುತ್ತಿತ್ತು. ಇಂದು ನಸುಕಿನ ಜಾವ 3.30 ಸುಮಾರಿಗೆ ಸೋಲಾಪುರದಿಂದ ನಾಗ್ಪುರ ರೈಲ್ವೆ ನಿಲ್ದಾಣದ ಕಡೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅವರು ನಾಗ್ಪುರ ರೈಲು ನಿಲ್ದಾಣದಿಂದ ಶ್ರಮಿಕ್ ವಿಶೇಷ ರೈಲಿನಲ್ಲಿ ತಮ್ಮೂರು ಜಾರ್ಖಂಡ್ ಗೆ ಹೋಗಲು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ನೂರುಲ್ ಹಸನ್ ತಿಳಿಸಿದ್ದಾರೆ.

ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆಯಿತು. ನಾಲ್ವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಕಸ್ಮಿಕ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!