ಮಮತಾ ಬ್ಯಾನರ್ಜಿ 
ದೇಶ

ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳದಲ್ಲಿ 72 ಮಂದಿ ಸಾವು: ಸಿಎಂ ಮಮತಾ

ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಅಂಫಾನ್ ಚಂಡಮಾರುತ ಸಂಬಂಧಿ ಅವಘಡಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಅಂಫಾನ್ ಚಂಡಮಾರುತ ಸಂಬಂಧಿ ಅವಘಡಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

72 ಮಂದಿ ಪೈಕಿ 15 ಮಂದಿ ಕೋಲ್ಕತ್ತಾದಲ್ಲಿಯೇ ಮೃತಪಟ್ಟಿದ್ದು, ಇತರೆ ಐದು ಜಿಲ್ಲೆಗಳಲ್ಲಿ ಹೆಚ್ಚು ಸಾವು ಸಂಭವಿಸಿವೆ ಎಂದು ಮಮತಾ ಬ್ಯಾನರ್ಜಿಅವರು ತಿಳಿಸಿದ್ದಾರೆ.

ಅಂಫಾನ್ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಅಲ್ಲದೆ ಅಂಫಾನ್ ಚಂಡಮಾರುತ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೀದಿ ಮನವಿ ಮಾಡಿದ್ದಾರೆ.

ಗರಿಷ್ಠ ಗಾಳಿಯ ವೇಗ 190 ಕಿ.ಮೀ ಮತ್ತು ಧಾರಾಕಾರ ಮಳೆಯೊಂದಿಗೆ ಅಬ್ಬರಿಸುತ್ತಿರುವ ಅಫಾನ್ ನಿಂದ ಸುಂದರಬನ್ ಪ್ರದೇಶ ಮತ್ತು ದಕ್ಷಿಣ ಬಂಗಾಳದ ಆರು ಜಿಲ್ಲೆಗಳು ತತ್ತರಿಸಿವೆ.

ಒಡಿಶಾದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪಶ್ಚಿಮ ಬಂಗಾಳದಲ್ಲಿ ಆತಂಕ ಸೃಷ್ಟಿಸಿದ್ದು, ಸಂತ್ರಸ್ತರ ಸ್ಥಳಾಂತರ ಕಾರ್ಯ ಭರದಿಂದ ಸಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?