ಭಾರತ-ನೇಪಾಳ ಗಡಿಯ ಬಗ್ಗೆ ನಿತಿನ್ ಗಡ್ಕರಿ ಮಾಡಿರುವ ಟ್ವೀಟ್ 
ದೇಶ

ನೇಪಾಳ ತೋರಿಸಿರುವ ಹೊಸ ಮ್ಯಾಪ್ ಅದರ ಕೃತಕ ಸೃಷ್ಟಿ, ಅದನ್ನು ಒಪ್ಪಲು ಸಾಧ್ಯವಿಲ್ಲ: ಭಾರತ

ಲಿಂಪಿಯಾಧುರಾ, ಲಿಪುಲೆಖ್, ಮತ್ತು ಕಲಾಪಣಿ ಪ್ರದೇಶಗಳು ತನ್ನ ಪ್ರಾಂತ್ಯಕ್ಕೆ ಸೇರಿದ್ದು ಎಂದು ನೇಪಾಳ ಹೇಳುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದು ಅದುವೇ ಸೃಷ್ಟಿಸಿಕೊಂಡ ಕೃತಕ  ಪ್ರತಿಪಾದನೆ, ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ನವದೆಹಲಿ: ಲಿಂಪಿಯಾಧುರಾ, ಲಿಪುಲೆಖ್, ಮತ್ತು ಕಲಾಪಣಿ ಪ್ರದೇಶಗಳು ತನ್ನ ಪ್ರಾಂತ್ಯಕ್ಕೆ ಸೇರಿದ್ದು ಎಂದು ನೇಪಾಳ ಹೇಳುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದು ಅದುವೇ ಸೃಷ್ಟಿಸಿಕೊಂಡ ಕೃತಕ  ಪ್ರತಿಪಾದನೆ, ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ಈ ಬಗ್ಗೆ ನೇಪಾಳ ಹೊಸ ಮ್ಯಾಪನ್ನು ಬಿಡುಗಡೆ ಮಾಡಿದ್ದು ಅಲ್ಲದೆ ಭಾರತದಿಂದ ನೇಪಾಳಕ್ಕೆ ಕೊರೋನಾ ವೈರಸ್ ಹಬ್ಬಿದೆ ಎಂದು ಪ್ರಧಾನಿ ಕೆ ಪಿ ಒಲಿ ಟೀಕಿಸಿದ್ದರು.

ನೇಪಾಳ ಸರ್ಕಾರದ ಏಕಪಕ್ಷೀಯ ನಿರ್ಧಾರ ಇದಾಗಿದ್ದು ಇದರ ಹಿಂದೆ ಯಾವುದೇ ಐತಿಹಾಸಿಕ ಸಂಗತಿಗಳು ಮತ್ತು ಪುರಾವೆಗಳನ್ನು ಆಧರಿಸಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಇಲಾಖೆಯ ವಕ್ತಾರ ಅನುರಾಗ್ ಶ್ರೀವಾಸ್ತವ ಮಾತನಾಡಿ, ಮಾತುಕತೆ ಮೂಲಕ ಬಗೆಹರಿಸಬಹುದಾದ ಎರಡೂ ದೇಶಗಳ ಗಡಿ ಸಮಸ್ಯೆಗಳು ಎರಡೂ ದೇಶಗಳ ನಡುವಣ ದ್ವಿಪಕ್ಷೀಯ ಸಂಬಂಧ ಅರ್ಥೈಸುವಿಕೆಗೆ ವ್ಯತಿರಿಕ್ತವಾಗಿದೆ ಎಂದು ಹೇಳಿದ್ದಾರೆ.

ಈ ವಿಷಯದಲ್ಲಿ ಭಾರತದ ನಿಯಮಿತ ನಿಲುವಿನ ಬಗ್ಗೆ ನೇಪಾಳಕ್ಕೆ ಚೆನ್ನಾಗಿ ಅರಿವಿದೆ, ಇಂತಹ ನ್ಯಾಯಸಮ್ಮತವಲ್ಲದ ಪ್ರತಿಪಾದನೆಯಿಂದ ದೂರವಿರಲು ಮತ್ತು ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವಂತೆ ನಾವು ನೇಪಾಳ ಸರ್ಕಾರವನ್ನು ಒತ್ತಾಯಿಸುತ್ತೇವೆ. ಗಡಿ ಸಮಸ್ಯೆಗಳನ್ನು ಪರಿಹರಿಸಲು ನೇಪಾಳ ನಾಯಕತ್ವವು ರಾಜತಾಂತ್ರಿಕ ಮಾತುಕತೆಗೆ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

ಬ್ರಿಟಿಷರೊಂದಿಗೆ 1816ರಲ್ಲಿ ಉತ್ತರಾಖಂಡದ ಲಿಪುಲೇಖ್ ಪಾಸ್ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರ ಪಶ್ಚಿಮ ಗಡಿ ಭಾರತದ ಪಾಲಾಗಿದೆ ಎಂದು ನೇಪಾಳ ಸುಗೌಲಿ ಒಪ್ಪಂದವನ್ನು ಉಲ್ಲೇಖಿಸಿ ಹೇಳುತ್ತಿದೆ. ಇಲ್ಲಿ ಎರಡೂ ದೇಶಗಳು 1800 ಕಿಲೋ ಮೀಟರ್ ಮುಕ್ತ ಗಡಿಭಾಗವನ್ನು ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT