ಭಾರತ-ನೇಪಾಳ ಗಡಿಯ ಬಗ್ಗೆ ನಿತಿನ್ ಗಡ್ಕರಿ ಮಾಡಿರುವ ಟ್ವೀಟ್ 
ದೇಶ

ನೇಪಾಳ ತೋರಿಸಿರುವ ಹೊಸ ಮ್ಯಾಪ್ ಅದರ ಕೃತಕ ಸೃಷ್ಟಿ, ಅದನ್ನು ಒಪ್ಪಲು ಸಾಧ್ಯವಿಲ್ಲ: ಭಾರತ

ಲಿಂಪಿಯಾಧುರಾ, ಲಿಪುಲೆಖ್, ಮತ್ತು ಕಲಾಪಣಿ ಪ್ರದೇಶಗಳು ತನ್ನ ಪ್ರಾಂತ್ಯಕ್ಕೆ ಸೇರಿದ್ದು ಎಂದು ನೇಪಾಳ ಹೇಳುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದು ಅದುವೇ ಸೃಷ್ಟಿಸಿಕೊಂಡ ಕೃತಕ  ಪ್ರತಿಪಾದನೆ, ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ನವದೆಹಲಿ: ಲಿಂಪಿಯಾಧುರಾ, ಲಿಪುಲೆಖ್, ಮತ್ತು ಕಲಾಪಣಿ ಪ್ರದೇಶಗಳು ತನ್ನ ಪ್ರಾಂತ್ಯಕ್ಕೆ ಸೇರಿದ್ದು ಎಂದು ನೇಪಾಳ ಹೇಳುತ್ತಿರುವುದು ಸತ್ಯಕ್ಕೆ ದೂರವಾದದ್ದು, ಇದು ಅದುವೇ ಸೃಷ್ಟಿಸಿಕೊಂಡ ಕೃತಕ  ಪ್ರತಿಪಾದನೆ, ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ಈ ಬಗ್ಗೆ ನೇಪಾಳ ಹೊಸ ಮ್ಯಾಪನ್ನು ಬಿಡುಗಡೆ ಮಾಡಿದ್ದು ಅಲ್ಲದೆ ಭಾರತದಿಂದ ನೇಪಾಳಕ್ಕೆ ಕೊರೋನಾ ವೈರಸ್ ಹಬ್ಬಿದೆ ಎಂದು ಪ್ರಧಾನಿ ಕೆ ಪಿ ಒಲಿ ಟೀಕಿಸಿದ್ದರು.

ನೇಪಾಳ ಸರ್ಕಾರದ ಏಕಪಕ್ಷೀಯ ನಿರ್ಧಾರ ಇದಾಗಿದ್ದು ಇದರ ಹಿಂದೆ ಯಾವುದೇ ಐತಿಹಾಸಿಕ ಸಂಗತಿಗಳು ಮತ್ತು ಪುರಾವೆಗಳನ್ನು ಆಧರಿಸಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಇಲಾಖೆಯ ವಕ್ತಾರ ಅನುರಾಗ್ ಶ್ರೀವಾಸ್ತವ ಮಾತನಾಡಿ, ಮಾತುಕತೆ ಮೂಲಕ ಬಗೆಹರಿಸಬಹುದಾದ ಎರಡೂ ದೇಶಗಳ ಗಡಿ ಸಮಸ್ಯೆಗಳು ಎರಡೂ ದೇಶಗಳ ನಡುವಣ ದ್ವಿಪಕ್ಷೀಯ ಸಂಬಂಧ ಅರ್ಥೈಸುವಿಕೆಗೆ ವ್ಯತಿರಿಕ್ತವಾಗಿದೆ ಎಂದು ಹೇಳಿದ್ದಾರೆ.

ಈ ವಿಷಯದಲ್ಲಿ ಭಾರತದ ನಿಯಮಿತ ನಿಲುವಿನ ಬಗ್ಗೆ ನೇಪಾಳಕ್ಕೆ ಚೆನ್ನಾಗಿ ಅರಿವಿದೆ, ಇಂತಹ ನ್ಯಾಯಸಮ್ಮತವಲ್ಲದ ಪ್ರತಿಪಾದನೆಯಿಂದ ದೂರವಿರಲು ಮತ್ತು ಭಾರತದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವಂತೆ ನಾವು ನೇಪಾಳ ಸರ್ಕಾರವನ್ನು ಒತ್ತಾಯಿಸುತ್ತೇವೆ. ಗಡಿ ಸಮಸ್ಯೆಗಳನ್ನು ಪರಿಹರಿಸಲು ನೇಪಾಳ ನಾಯಕತ್ವವು ರಾಜತಾಂತ್ರಿಕ ಮಾತುಕತೆಗೆ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

ಬ್ರಿಟಿಷರೊಂದಿಗೆ 1816ರಲ್ಲಿ ಉತ್ತರಾಖಂಡದ ಲಿಪುಲೇಖ್ ಪಾಸ್ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದರ ಪಶ್ಚಿಮ ಗಡಿ ಭಾರತದ ಪಾಲಾಗಿದೆ ಎಂದು ನೇಪಾಳ ಸುಗೌಲಿ ಒಪ್ಪಂದವನ್ನು ಉಲ್ಲೇಖಿಸಿ ಹೇಳುತ್ತಿದೆ. ಇಲ್ಲಿ ಎರಡೂ ದೇಶಗಳು 1800 ಕಿಲೋ ಮೀಟರ್ ಮುಕ್ತ ಗಡಿಭಾಗವನ್ನು ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT