ಏರ್ ಇಂಡಿಯಾ ವಿಮಾನ 
ದೇಶ

ಏರ್ ಇಂಡಿಯಾ, ಇತರೆ ವಿಮಾನಯಾನ ಕಂಪನಿಗಳ ಬುಕಿಂಗ್ ಆರಂಭ

ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ದೇಶೀಯ ವಿಮಾನ ಹಾರಾಟ ಮೇ 25 ರಿಂದ ಆರಂಭವಾಗಲಿದ್ದು, ಇದಕ್ಕಾಗಿ ಶುಕ್ರವಾರದಿಂದಲೇ ಬುಕಿಂಗ್ ಪ್ರಾರಂಭಿಸಿವೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಇತರ ವಿಮಾನಯಾನ ಸಂಸ್ಥೆಗಳ ದೇಶೀಯ ವಿಮಾನ ಹಾರಾಟ ಮೇ 25 ರಿಂದ ಆರಂಭವಾಗಲಿದ್ದು, ಇದಕ್ಕಾಗಿ ಶುಕ್ರವಾರದಿಂದಲೇ ಬುಕಿಂಗ್ ಪ್ರಾರಂಭಿಸಿವೆ.

ಏರ್ ಇಂಡಿಯಾ ಇಂದು ಮಧ್ಯಾಹ್ನ 12.30 ಕ್ಕೆ ಬುಕಿಂಗ್ ಪ್ರಾರಂಭಿಸಿದೆ. ಟಿಕೆಟ್‌ಗಳನ್ನು ನೇರವಾಗಿ ವಿಮಾನಯಾನ ಸಂಸ್ಥೆಗಳ ವೆಬ್‌ಸೈಟ್‌ನಿಂದ ಮತ್ತು ಅದರ ಅಧಿಕೃತ ಏಜೆಂಟರು ಅಥವಾ ಬುಕಿಂಗ್ ಕಚೇರಿಗಳಿಂದ ಕಾಯ್ದಿರಿಸಬಹುದು ಎಂದು ತಿಳಿಸಿದೆ.

ಖಾಸಗಿ ವಿಮಾನಯಾನ ಸಂಸ್ಥೆಗಳಾದ ವಿಸ್ಟಾರಾ ಕೂಡ ಪತ್ರಿಕಾ ಪ್ರಕಟಣೆಯಲ್ಲಿ ಬುಕಿಂಗ್ ಪ್ರಾರಂಭಿಸುವುದಾಗಿ ಘೋಷಿಸಿದೆ. ಪ್ರಸ್ತುತ ವಿಮಾನಗಳ ಸಂಖ್ಯೆ ಕಡಿಮೆ ಇರುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಬೇಸಿಗೆ ವೇಳಾಪಟ್ಟಿಗೆ ಹೋಲಿಸಿದರೆ ಮೂರನೇ ಒಂದು ಭಾಗದಷ್ಟು ವಿಮಾನಗಳು ಕಾರ್ಯನಿರ್ವಹಿಸಲು ಸರ್ಕಾರ ಈಗಾಗಲೇ ಅನುಮತಿ ನೀಡಿದೆ.

ಕೈಗೆಟುಕುವ ವಿಮಾನಯಾನ ಸಂಸ್ಥೆಗಳಾದ ಇಂಡಿಗೊ ಮತ್ತು ಸ್ಪೈಸ್‌ಜೆಟ್ ಸಹ ಬುಕಿಂಗ್ ಪ್ರಾರಂಭಿಸಿವೆ. ಕೊವಿಡ್ -19 ರ ದೃಷ್ಟಿಯಿಂದ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಲ್ಲಾ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ ಮನವಿ ಮಾಡಿದೆ.

ಎರಡು ತಿಂಗಳ ಅಂತರದ ನಂತರ ಹಲವಾರು ಷರತ್ತುಗಳೊಂದಿಗೆ ಮೇ 25 ರಿಂದ ದೇಶೀಯ ವಿಮಾನಯಾನಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಕೊವಿಡ್ -19 ನಿಯಂತ್ರಿಸುವುದಕ್ಕಾಗಿ ಮಾರ್ಚ್ 25 ರಿಂದ ಎಲ್ಲಾ ದೇಶೀಯ ವಿಮಾನಗಳನ್ನು ಸ್ಥಗಿತಗೊಳಿಸಲಾಗಿತ್ತು. ವಿಮಾನಗಳ ಸಂಖ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ, ವಿಮಾನದ ಸಮಯಕ್ಕೆ ಅನುಗುಣವಾಗಿ ಪ್ರತಿ ಮಾರ್ಗಕ್ಕೂ ಗರಿಷ್ಠ ಮತ್ತು ಕನಿಷ್ಠ ಶುಲ್ಕವನ್ನು ಸರ್ಕಾರ ನಿಗದಿಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT