ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ಭಯ: ಬೆಂಗಳೂರಿಂದ ಕೊಚ್ಚಿಗೆ ಹೋಗಲು 5 ಲಕ್ಷ ರೂ. ಕೊಟ್ಟು ಹೆಲಿಕಾಪ್ಟರ್ ಬುಕ್ ಮಾಡಿದ ಮಲೆಯಾಳಿ ಕುಟುಂಬ!

ಇನ್ನು ಕೆಲವೇ ದಿನಗಳಲ್ಲಿ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ. ಈಗ ಎಲ್ಲಾ ಕಡೆಯೂ ಕೊರೋನಾ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಇರುವಾಗ ಕೇರಳದ ಮಲೆಯಾಳಿ ಕುಟುಂಬವೊಂದು ಅಪರಿಚಿತ ಪ್ರಯಾಣಿಕರೊಂದಿಗೆ ವಿಮಾನದಲ್ಲಿ ಹಾರಾಟ ಮಾಡದೆ 5 ಲಕ್ಷ ರೂಪಾಯಿಗೆ ಪ್ರತ್ಯೇಕ ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿದ್ದಾರೆ.

ಕೊಚ್ಚಿ: ಇನ್ನು ಕೆಲವೇ ದಿನಗಳಲ್ಲಿ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ. ಈಗ ಎಲ್ಲಾ ಕಡೆಯೂ ಕೊರೋನಾ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಇರುವಾಗ ಕೇರಳದ ಮಲೆಯಾಳಿ ಕುಟುಂಬವೊಂದು ಅಪರಿಚಿತ ಪ್ರಯಾಣಿಕರೊಂದಿಗೆ ವಿಮಾನದಲ್ಲಿ ಹಾರಾಟ ಮಾಡಲು ಭಯದಿಂದ 5 ಲಕ್ಷ ರೂಪಾಯಿಗೆ ಪ್ರತ್ಯೇಕ ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿದ್ದಾರೆ.

ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಪ್ರಯಾಣಿಸಲು ಮಲೆಯಾಳಿಗಳು ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ ಮಾಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಮಾಡಿದ ನಂತರ ಖಾಸಗಿ ಚಾರ್ಟೆರ್ಡ್ ವಿಮಾನಗಳಿಗೆ ಲ್ಯಾಂಡಿಂಗ್ ಆಗಲು ಅನುಮತಿ ನೀಡುವಂತೆ ಮನವಿಗಳು ಬರುತ್ತಿವೆ ಎಂದು ಕೊಚ್ಚಿ ವಿಮಾನ ನಿಲ್ದಾಣ ಅಧಿಕಾರಿಗಳು ಹೇಳಿದ್ದಾರೆ.

ಕೊರೋನಾ ಭಯದಿಂದ ಹಲವರು ಚಾರ್ಟೆರ್ಡ್ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಲಾಕ್ ಡೌನ್ ನ ಮೊದಲ ಮತ್ತು ಎರಡನೇ ಹಂತದಲ್ಲಿ ಕೇರಳಕ್ಕೆ ಹೋಗಲು ದೇಶದ ಹಲವು ಭಾಗಗಳಿಂದ ಈ ರೀತಿ ವಿಚಾರಣೆಗಳು ಬಂದಿವೆ. ಈಗ ಲಾಕ್ಡೌನ್ ಸಡಿಲಿಕೆಯಾದ ನಂತರ ನಮಗೆ ಖಾಸಗಿಯವರಿಗೆ ಸೇವೆ ಒದಗಿಸಲು ಸಾಧ್ಯವೆನಿಸುತ್ತಿದೆ ಎಂದು ಖಾಸಗಿ ವಿಮಾನಯಾನದ ಹಿರಿಯ ಕಾರ್ಯಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT