ಸಾಂದರ್ಭಿಕ ಚಿತ್ರ 
ದೇಶ

ಕೊರೋನಾ ಭಯ: ಬೆಂಗಳೂರಿಂದ ಕೊಚ್ಚಿಗೆ ಹೋಗಲು 5 ಲಕ್ಷ ರೂ. ಕೊಟ್ಟು ಹೆಲಿಕಾಪ್ಟರ್ ಬುಕ್ ಮಾಡಿದ ಮಲೆಯಾಳಿ ಕುಟುಂಬ!

ಇನ್ನು ಕೆಲವೇ ದಿನಗಳಲ್ಲಿ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ. ಈಗ ಎಲ್ಲಾ ಕಡೆಯೂ ಕೊರೋನಾ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಇರುವಾಗ ಕೇರಳದ ಮಲೆಯಾಳಿ ಕುಟುಂಬವೊಂದು ಅಪರಿಚಿತ ಪ್ರಯಾಣಿಕರೊಂದಿಗೆ ವಿಮಾನದಲ್ಲಿ ಹಾರಾಟ ಮಾಡದೆ 5 ಲಕ್ಷ ರೂಪಾಯಿಗೆ ಪ್ರತ್ಯೇಕ ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿದ್ದಾರೆ.

ಕೊಚ್ಚಿ: ಇನ್ನು ಕೆಲವೇ ದಿನಗಳಲ್ಲಿ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ. ಈಗ ಎಲ್ಲಾ ಕಡೆಯೂ ಕೊರೋನಾ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಇರುವಾಗ ಕೇರಳದ ಮಲೆಯಾಳಿ ಕುಟುಂಬವೊಂದು ಅಪರಿಚಿತ ಪ್ರಯಾಣಿಕರೊಂದಿಗೆ ವಿಮಾನದಲ್ಲಿ ಹಾರಾಟ ಮಾಡಲು ಭಯದಿಂದ 5 ಲಕ್ಷ ರೂಪಾಯಿಗೆ ಪ್ರತ್ಯೇಕ ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿದ್ದಾರೆ.

ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಪ್ರಯಾಣಿಸಲು ಮಲೆಯಾಳಿಗಳು ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ ಮಾಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಮಾಡಿದ ನಂತರ ಖಾಸಗಿ ಚಾರ್ಟೆರ್ಡ್ ವಿಮಾನಗಳಿಗೆ ಲ್ಯಾಂಡಿಂಗ್ ಆಗಲು ಅನುಮತಿ ನೀಡುವಂತೆ ಮನವಿಗಳು ಬರುತ್ತಿವೆ ಎಂದು ಕೊಚ್ಚಿ ವಿಮಾನ ನಿಲ್ದಾಣ ಅಧಿಕಾರಿಗಳು ಹೇಳಿದ್ದಾರೆ.

ಕೊರೋನಾ ಭಯದಿಂದ ಹಲವರು ಚಾರ್ಟೆರ್ಡ್ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಲಾಕ್ ಡೌನ್ ನ ಮೊದಲ ಮತ್ತು ಎರಡನೇ ಹಂತದಲ್ಲಿ ಕೇರಳಕ್ಕೆ ಹೋಗಲು ದೇಶದ ಹಲವು ಭಾಗಗಳಿಂದ ಈ ರೀತಿ ವಿಚಾರಣೆಗಳು ಬಂದಿವೆ. ಈಗ ಲಾಕ್ಡೌನ್ ಸಡಿಲಿಕೆಯಾದ ನಂತರ ನಮಗೆ ಖಾಸಗಿಯವರಿಗೆ ಸೇವೆ ಒದಗಿಸಲು ಸಾಧ್ಯವೆನಿಸುತ್ತಿದೆ ಎಂದು ಖಾಸಗಿ ವಿಮಾನಯಾನದ ಹಿರಿಯ ಕಾರ್ಯಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT