ಹರದೀಪ್ ಸಿಂಗ್ ಪುರಿ 
ದೇಶ

ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿ

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್  ಸಿಂಗ್ ಪುರಿ ಹೇಳಿದ್ದಾರೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್  ಸಿಂಗ್ ಪುರಿ ಹೇಳಿದ್ದಾರೆ.

ಮಾರಣಾಂತಿಕ ಕೊರೋನಾ ವೈರಸ್‌ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕಳೆದ ಮಾರ್ಚ್ 25 ರಿಂದ ದೇಶದಾದ್ಯಂತ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿತ್ತು. ಹೀಗಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನವನ್ನು  ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಎರಡನೇ ಹಂತದ ಲಾಕ್‌ಡೌನ್ ಮುಗಿಯುವ ವೇಳೆ ಸ್ಥಳೀಯ ವಿಮಾನ ಸೇವೆ ಆರಂಭಿಸುವುದಾಗಿ ಏರ್‌ ಇಂಡಿಯಾ ತಿಳಿಸಿತ್ತು. ಆದರೆ, ಕಾರಣಾಂತರಗಳಿಂದ ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ನಡುವೆ  ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ಸಡಿಲಿಕೆ ಮಾಡಲಾಗಿದ್ದು, ಕೇಂದ್ರ ವಿಮಾನಯಾನ ಸಚಿವಾಲಯ ವಿಮಾನ ಸೇವೆ ಆರಂಭಕ್ಕೆ ಮುಂದಾಗಿದೆ.

ಈ ಕುರಿತು ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೇಂದ್ರ ನಾಗರೀಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್ ಪುರಿ, "2020 ರ ಮೇ 25 ರಿಂದ ದೇಶೀಯ ನಾಗರಿಕ ವಿಮಾನಯಾನ ಕಾರ್ಯಾಚರಣೆಗಳು ಆರಂಭವಾಗಲಿದ್ದು, ಹಂತ ಹಂತವಾಗಿ ವಿಮಾನಗಳ ಸಂಖ್ಯೆಯನ್ನು  ಹೆಚ್ಚಿಸಲಾಗುವುದು. ಹೀಗಾಗಿ ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ವಿಮಾನವಾಹಕ ನೌಕೆಗಳು ಮೇ 25 ರಿಂದ ಕಾರ್ಯಾಚರಣೆಗೆ ಸಿದ್ಧವಾಗುವಂತೆ ತಿಳಿಸಲಾಗುತ್ತಿದೆ. ಪ್ರಯಾಣಿಕರ ಸಂಚಾರಕ್ಕಾಗಿ ಎಸ್‌ಒಪಿಗಳನ್ನು ಸಹ ಪ್ರತ್ಯೇಕವಾಗಿ ನೀಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತವಾಗಿದ್ದ ದೇಶೀಯ ನಾಗರೀಕ ವಿಮಾನಯಾನ ಮೇ 25, 2020 ರಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದ ಸಚಿವರು ಈ ಬಗ್ಗೆ ನಿಖರ ದಿನಾಂಕ ಹೇಳಲು ಸಾಧ್ಯವಿಲ್ಲ, ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಈ  ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT