ಹರದೀಪ್ ಸಿಂಗ್ ಪುರಿ 
ದೇಶ

ಆಗಸ್ಟ್ ಹೊತ್ತಿಗೆ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ಪ್ರಯತ್ನ: ಸಚಿವ ಹರ್ದೀಪ್ ಸಿಂಗ್ ಪುರಿ

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್  ಸಿಂಗ್ ಪುರಿ ಹೇಳಿದ್ದಾರೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದಿಂದಾಗಿ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್  ಸಿಂಗ್ ಪುರಿ ಹೇಳಿದ್ದಾರೆ.

ಮಾರಣಾಂತಿಕ ಕೊರೋನಾ ವೈರಸ್‌ ಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಕಳೆದ ಮಾರ್ಚ್ 25 ರಿಂದ ದೇಶದಾದ್ಯಂತ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿತ್ತು. ಹೀಗಾಗಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಯಾನವನ್ನು  ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಎರಡನೇ ಹಂತದ ಲಾಕ್‌ಡೌನ್ ಮುಗಿಯುವ ವೇಳೆ ಸ್ಥಳೀಯ ವಿಮಾನ ಸೇವೆ ಆರಂಭಿಸುವುದಾಗಿ ಏರ್‌ ಇಂಡಿಯಾ ತಿಳಿಸಿತ್ತು. ಆದರೆ, ಕಾರಣಾಂತರಗಳಿಂದ ಕೇಂದ್ರ ಸರ್ಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಈ ನಡುವೆ  ಲಾಕ್‌ಡೌನ್‌ ಅನ್ನು ಹಂತ ಹಂತವಾಗಿ ಸಡಿಲಿಕೆ ಮಾಡಲಾಗಿದ್ದು, ಕೇಂದ್ರ ವಿಮಾನಯಾನ ಸಚಿವಾಲಯ ವಿಮಾನ ಸೇವೆ ಆರಂಭಕ್ಕೆ ಮುಂದಾಗಿದೆ.

ಈ ಕುರಿತು ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೇಂದ್ರ ನಾಗರೀಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್ ಪುರಿ, "2020 ರ ಮೇ 25 ರಿಂದ ದೇಶೀಯ ನಾಗರಿಕ ವಿಮಾನಯಾನ ಕಾರ್ಯಾಚರಣೆಗಳು ಆರಂಭವಾಗಲಿದ್ದು, ಹಂತ ಹಂತವಾಗಿ ವಿಮಾನಗಳ ಸಂಖ್ಯೆಯನ್ನು  ಹೆಚ್ಚಿಸಲಾಗುವುದು. ಹೀಗಾಗಿ ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ವಿಮಾನವಾಹಕ ನೌಕೆಗಳು ಮೇ 25 ರಿಂದ ಕಾರ್ಯಾಚರಣೆಗೆ ಸಿದ್ಧವಾಗುವಂತೆ ತಿಳಿಸಲಾಗುತ್ತಿದೆ. ಪ್ರಯಾಣಿಕರ ಸಂಚಾರಕ್ಕಾಗಿ ಎಸ್‌ಒಪಿಗಳನ್ನು ಸಹ ಪ್ರತ್ಯೇಕವಾಗಿ ನೀಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತವಾಗಿದ್ದ ದೇಶೀಯ ನಾಗರೀಕ ವಿಮಾನಯಾನ ಮೇ 25, 2020 ರಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ. 

ಇದೇ ವೇಳೆ ಸ್ಥಗಿತವಾಗಿರುವ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಆಗಸ್ಟ್ ತಿಂಗಳ ಹೊತ್ತಿಗೆ ಮತ್ತೆ ಚಾಲನೆ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದ ಸಚಿವರು ಈ ಬಗ್ಗೆ ನಿಖರ ದಿನಾಂಕ ಹೇಳಲು ಸಾಧ್ಯವಿಲ್ಲ, ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಗಳಲ್ಲಿ ಈ  ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!