ರುದ್ರಪಶುಪತಿ ಶಿವಾಚಾರ್ಯ 
ದೇಶ

ಮಹಾರಾಷ್ಟ್ರದಲ್ಲಿ ಕರ್ನಾಟಕ ಮೂಲದ ಸ್ವಾಮೀಜಿ ಬರ್ಬರ ಹತ್ಯೆ!

ಕರ್ನಾಟಕ ಮೂಲದ ಸ್ವಾಮೀಜಿಯೊಬ್ಬರು ಮಹಾರಾಷ್ಟ್ರದಲ್ಲಿ ಕಳ್ಳರಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ.

ನಾಂದೇಡ್: ಕರ್ನಾಟಕ ಮೂಲದ ಸ್ವಾಮೀಜಿಯೊಬ್ಬರು ಮಹಾರಾಷ್ಟ್ರದಲ್ಲಿ ಕಳ್ಳರಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ.

ಮಠದಲ್ಲಿ ಕಳ್ಳತನಕ್ಕೆ ಬಂದ ಕಳ್ಳರು ಪೀಠಾಧಿಪತಿಯ ಹತ್ಯೆಮಾಡಿ‌ ನಂತರ ಮಠದಲ್ಲಿ ಕೆಲಸಮಾಡುತ್ತಿದ್ದ ಮತ್ತೋರ್ವ 50 ವ್ಯಕ್ತಿಯನ್ನ ಸಹ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹತ್ತೆಯಾದ ಶ್ರೀಗಳು ಗಣಿನಾಡು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ನಂದೀಪುರ ಗ್ರಾಮದ ದೊಡ್ಡಬಸವೇಶ್ವರ ಮಠದ ಚರಂತಪ್ಪಜ್ಜನವರ ಮಗ ರುದ್ರಪಶುಪತಿ ಶಿವಾಚಾರ್ಯ ಶ್ರೀಗಳೇ ಹತ್ಯೆಗೀಡಾದ ಸ್ವಾಮೀಜಿಗಳು.

ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಉಮರಿ ತಾಲೂಕಿನ ನಾಗಠಾಣದ ನಿರ್ವಾಣಿ ಮಠದ ಪೀಠಾಧಿಯಾಗಿದ್ದ ಶ್ರೀಗಳು ಹಲವು ವರ್ಷಗಳಿಂದ ಅಲ್ಲೇ ವಾಸವಾಗಿದ್ರು, ನಾಗಠಾಣದ ನಿರ್ವಾಣಿ ಮಠ ಉಜ್ಜಯಿನಿ ಪೀಠದ ಶಾಖಾ ಮಠವಾಗಿದ್ದರಿಂದ ಮಹಾರಾಷ್ಟ್ರದಲ್ಲಿ ದೊಡ್ಡ ಭಕ್ತ ಸಮೂಹವನ್ನ ಹೊಂದಿದ್ರು ಶ್ರೀಗಳು, ನಿನ್ನೆ ತಡರಾತ್ರಿ ಬಂದ ಕಳ್ಳರ ಗುಂಪು ಶ್ರೀಗಳನ್ನ ಹತ್ಯೆಮಾಡಿ ನಂತರ ಮಠದಲ್ಲಿ‌ಕೆಲಸಮಾಡುತಿದ್ದ ಕೆಲಸಗಾರನನ್ನ ಸಹ ಕೊಲೆಮಾಡಿ ಪರಾರಿಯಾಗಿದ್ದಾರೆ.

ಇಂದು ಬೆಳಗ್ಗೆ ವಿಷಯ ಬಹಿರಂಗವಾಗಿದ್ದು ರುದ್ರಪಶುಪತಿ ಶ್ರೀಗಳ ಸಹೋದರರಾದ ನಂದಿಪುರ ಮಠದ ಮಹೇಶ್ವರ ಮಹಾಸ್ವಾಮಿಗಳು ಇಂದು‌ ಮಹಾರಾಷ್ಟ್ರಕ್ಕೆ ತೆರಳಿದ್ದಾರೆ. ಸದ್ಯಕ್ಕೆ ಶ್ರೀಗಳ ಕೊಲೆ ಹಲವು ಹನುಮಾನ್ನ ಮೂಡಿಸಿದ್ದು ತನಿಖೆಯ ನಂತರ ಎಲ್ಲವೂ ಬಯಲಾಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT