ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರದಿಂದ ವಿಮಾನ,ರೈಲು,ಅಂತರ ರಾಜ್ಯ ಸಂಚಾರಕ್ಕೆ ಹೊಸ ಮಾರ್ಗಸೂಚಿ 

ನಾಳೆಯಿಂದ ದೇಶೀಯ ವಿಮಾನ ಹಾರಾಟ ಆರಂಭವಾಗಲಿದ್ದು, ವಿಮಾನ, ರೈಲು ಮತ್ತು  ಅಂತರರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. 

ನವದೆಹಲಿ: ನಾಳೆಯಿಂದ ದೇಶೀಯ ವಿಮಾನ ಹಾರಾಟ ಆರಂಭವಾಗಲಿದ್ದು, ವಿಮಾನ, ರೈಲು ಮತ್ತು  ಅಂತರರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. 

ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ತಾಸು ಮುಂಚೆ ತಲುಪಿ, ತಾಪಾಸಣೆಗೆ ಒಳಪಡಬೇಕು. ಮುಖಗವಸು ಕಡ್ಡಾಯವಾಗಿ ಧರಿಸಬೇಕು. ಕೈಚೀಲಗಳಲ್ಲಿ ಕಡಿಮೆ ತೂಕದ ಲಗ್ಗೇಜ್ ಕೊಂಡೊಯ್ಯಬೇಕು. ಆರೋಗ್ಯ ಸೇತು ಆಪ್ ಅನ್ನು ಡೌನ್ ಲೋಡ್ ಮಾಡಿಕೊಂಡು ಬಳಸಬೇಕು ಎಂದು ಸಚಿವಾಲಯ ಸೂಚಿಸಿದೆ. 

ಪ್ರಯಾಣಿಕರನ್ನು ತಪಾಸಣೆಗೊಳಪಡಿಸಿ ಸೋಂಕು ಲಕ್ಷಣ ಇಲ್ಲದ ಪ್ರಯಾಣಿಕರನ್ನು ಮಾತ್ರ ಪ್ರಯಾಣಕ್ಕೆ ಅನುಮತಿಸಬೇಕು. ಸೋಂಕು ಲಕ್ಷಣ ಇರುವವರನ್ನು ಆರೋಗ್ಯ  ಕೇಂದ್ರಗಳಿಗೆ, ಸೋಂಕು ತೀವ್ರತೆ ಹೆಚ್ಚಿರುವವವರನ್ನು ಕೋವಿಡ್ 
19 ಆಸ್ಪತ್ರೆಗಳಿಗೆ ದಾಖಲಿಸಬೇಕು ವಿಮಾನ ನಿಲ್ದಾಣದಿಂದ ಹೊರಬರುವಾಗಲೂ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಸಚಿವಾಲಯ ಸೂಚಿಸಿದೆ.

ಈ ಮಧ್ಯೆ, ಮಹಾರಾಷ್ಟ್ರ ಮತ್ತು ತಮಿಳುನಾಡು ಸರ್ಕಾರಗಳು ವಿಮಾನ ಹಾರಾಟಕ್ಕೆ ಅನುಮತಿ ನೀಡಿಲ್ಲ. 
ಅಂತರರಾಜ್ಯ ಬಸ್ ಪ್ರಯಾಣ ಮತ್ತು ರೈಲು ಪ್ರಯಾಣಕ್ಕೂ ಇದೇ ಮಾರ್ಗಸೂಚಿಗಳು ಅನ್ವಯಿಸುತ್ತವೆ ಎಂದು ಸಚಿವಾಲಯ ಹೇಳಿದೆ.

ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೂ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿದೇಶಗಳಿಂದ ಆಗಮಿಸುವವರು 14 ದಿನಗಳ ಕಡ್ಡಾಯ  ಕ್ವಾರಂಟೈನ್ ಗೆ ಒಳಪಡಬೇಕು. ಇದರಲ್ಲಿ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ,  ಏಳುದಿನಗಳ ಗೃಹ ಕ್ವಾರಂಟೈನ್  ಸೇರಿದ್ದು, ಕ್ವಾರಂಟೈನ್ ನ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕಾಗುತ್ತದೆ. 

ಸೋಂಕು ಲಕ್ಷಣ ಕಂಡುಬಂದರೆ ಅಂತವರನ್ನು ವಿಮಾನ ನಿಲ್ದಾಣಗಳಿಂದ ತಕ್ಷಣವೇ ಆಸ್ಪತ್ರೆಗಳಿಗೆ ದಾಖಲಿಸಲಾಗುತ್ತದೆ. ವಿಮಾನಗಳ ಮೂಲಕ ದೇಶಕ್ಕೆ ವಾಪಸ್ಸಾಗುವವರು ವ್ಯಕ್ತಿಗತ ಅಂತರ, ಮುಖಗವಸು ಧರಿಸುವುದು ಸೇರಿದಂತೆ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಯಾಣಿಕರು ಆರೋಗ್ಯ ಸೇತು ಆಪ್  ಮೂಲಕ ಅರ್ಜಿ ಪಡೆದು ಆರೋಗ್ಯದ ಬಗ್ಗೆ ಸ್ವಯಂ ಧೃಡೀಕರಣ ಘೋಷಿಸಬೇಕು ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT