ದೇಶ

ಸೋಂಕು ನಿಯಂತ್ರಣ ಮತ್ತು ಮರಣ ಪ್ರಮಾಣ ತಗ್ಗಿಸುವಲ್ಲಿ ಮುಂಚೂಣಿಯಲ್ಲಿ ಬೆಂಗಳೂರು: ಸಿಎಂ ಯಡಿಯೂರಪ್ಪ

Vishwanath S

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ಕೋವಿಡ್-19 ಸೋಂಕು ನಿಯಂತ್ರಣ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೪ ಮಾದರಿ ನಗರಗಳನ್ನು ಕೇಂದ್ರ ಗುರುತಿಸಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಕೊರೊನಾ ಯೋಧರ ಪರಿಶ್ರಮಕ್ಕೆ ಅನುಮೋದನೆ ದೊರೆತಿದೆ. ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದು, ಉತ್ತಮ ಸೇವೆಯನ್ನು ಮುಂದುವರಿಸೋಣ ಎಂದು ಯಡಿಯೂರಪ್ಪ ಕರೆ ನೀಡಿದ್ದಾರೆ.

SCROLL FOR NEXT