ದೇಶಿ ವಿಮಾನಗಳಾ ಹಾರಾಟ ಆರಂಭ: ರೋಗಲಕ್ಷಣಗಳಿಲ್ಲದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ 
ದೇಶ

2 ತಿಂಗಳ ಬಳಿಕ ದೇಶಿ ವಿಮಾನಗಳ ಹಾರಾಟ ಆರಂಭ: ಪ್ರಯಾಣಕ್ಕೆ ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಕೊರೋನಾ ವೈರಸ್ ತಡೆಗೆ ವಿಧಿಸಲಾಗಿದ್ದ ದೀರ್ಘಾವಧಿಯ ಲಾಕ್ ಡೌನ್ ನಂತರ ದೇಶಿಯ ವಿಮಾನಗಳ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದ್ದು, ಮೇ 25 ರಿಂದ ವಿಮಾನಗಳು ಪುನಃ ಕಾರ್ಯಾರಂಭ ಮಾಡಲಿವೆ.

ನವದೆಹಲಿ: ಕೊರೋನಾ ವೈರಸ್ ತಡೆಗೆ ವಿಧಿಸಲಾಗಿದ್ದ ದೀರ್ಘಾವಧಿಯ ಲಾಕ್ ಡೌನ್ ನಂತರ ದೇಶಿಯ ವಿಮಾನಗಳ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದ್ದು, ಮೇ 25 ರಿಂದ ವಿಮಾನಗಳು ಪುನಃ ಕಾರ್ಯಾರಂಭ ಮಾಡಲಿವೆ.

ವಿಮಾನಗಳಾ ಕಾರ್ಯಾರಂಭಕ್ಕೂ ಮುನ್ನ ಸರ್ಕಾರ ಮತ್ತೊಮ್ಮೆ ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟನೆ ನೀಡಿದ್ದು,ಕೊರೋನಾ ರೋಗಲಕ್ಷಣಗಳು ಇಲ್ಲದವರು ಮಾತ್ರ ವಿಮಾನಗಳಲ್ಲಿ ಪ್ರಯಾಣ ಮಾಡಬಹುದಾಗಿದೆ, ಒಂದು ವೇಳೆ ಪ್ರಯಾಣದ ನಂತರ ರೋಗಲಕ್ಷಣಗಳು ಕಾಣಿಸಿಕೊಂಡರೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಮ್ಮ ಪ್ರಯಾಣದ ಬಗ್ಗೆ ಮಾಹಿತಿಯನ್ನು ನೀಡಬೇಕೆಂದು ಸೂಚಿಸಿದೆ. 

ಇನ್ನು ವಿದೇಶದಿಂದ ಭಾರತಕ್ಕೆ ವಿಮಾನದಲ್ಲಿ ಬರುವವರಿಗೂ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಯಾಣದ ನಂತರ, ಕಡ್ಡಾಯವಾಗಿ 14 ದಿನಗಳ ಕಾಲ ತಮ್ಮದೇ ಖರ್ಚಿನಲ್ಲಿ ಕ್ವಾರಂಟೇನ್, ನಂತರ 7 ದಿನಗಳ ಕಾಲ ಮನೆಯಲ್ಲಿಯೇ ಐಸೊಲೇಷನ್ ನಲ್ಲಿರುತ್ತೇವೆ ಎಂಬ ನಿಯಮಗಳಿಗೆ ಬದ್ಧರಾಗಿರುತ್ತೇವೆ ಎಂದು ಭಾರತಕ್ಕೆ ತೆರಳುವ ವಿಮಾನ ಹತ್ತುವ ಮುನ್ನ ಸಹಿ ಮಾಡಬೇಕಾಗುತ್ತದೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT